BREAKING NEWS

ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ : ಬಿಕೆ ಹರಿಪ್ರಸಾದ್​

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗದವರು. ಅಧಿಕಾರ ಬಂದಾಗ ಕೆಲವೇ ಸಮುದಾಯ ಅಧಿಕಾರ ಅನುಭವಿಸುತ್ತಿದೆ. ಎಲ್ಲಾ ವರ್ಗದವರಿಗೂ ಅಧಿಕಾರ ಸಿಗುವಂತಾಗಲಿ ಎಂದು ವಿಧಾನ್ ಪರಿಷತ್​ ಸದಸ್ಯ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಒನ್ ನೇಷನ್ ಒನ್ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಬಂದ ಮೇಲೆ ಘೋಷಣೆಗಳಿಗೆ ಏನು ಕಡಿಮೆ ಇಲ್ಲ. ರಾಷ್ಟ್ರದಲ್ಲಿನ ವೈವಿದ್ಯತೆಯನ್ನು ಹಾಳು ಮಾಡುತ್ತಿದ್ದಾರೆ. ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಒನ್ ನೇಷನ್ ಒನ್ ಲೀಡರ್ ಅಂದರೂ ಅನ್ನಬಹುದು. ದೇಶದಲ್ಲಿ ಚುನಾವಣೆಯನ್ನು ಇಡಿ ಬಳಸದೆ ನಡೆಸಬೇಕಿದೆ ಎಂದರು.

ಇನ್ನು ತಮಗೆ ಅವರಿಗೆ ಮಂತ್ರಿಸ್ಥಾನ ಸಿಗದೆ ಇರುವ ವಿಚಾರವಾಗಿ ಮಾತನಾಡಿದ ಅವರು ನಾನು ಪಕ್ಕಾ ಕಾಂಗ್ರೆಸ್​ನವನು. ನನ್ನ ಹೋರಾಟ ನನ್ನ ಮಂತ್ರಿ ಮಾಡಿಲ್ಲ ಅಂತ ಅಲ್ಲ. ಸಣ್ಣ ಸಮುದಾಯಗಳಿಗೆ ಅವಕಾಶ‌ ಸಿಗಬೇಕು ಅನ್ನೋದು ನಮ್ಮ ಹೋರಾಟ. ಅದಕ್ಕಾಗಿ ನಾನು ಬೀದಿಗಳಿದು ಹೋರಾಟಕ್ಕೂ ಕೂಡಾ ಸಿದ್ದನಿದ್ದೇನೆ. ಇಂದಿರಾಗಾಂಧಿ ಅವರನ್ನು ನೋಡಿ ಇಂದಿನವರು ಕಲಿಬೇಕು. ಜವಾನನಿಂದ ದಿವಾನವರಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ನೀಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಸವರಾಜ್ ರಾಯರೆಡ್ಡಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು ರಾಯರೆಡ್ಡಿ, ಸಿದ್ದರಾಮಯ್ಯನವರ ಖಾಸಗಿ ಸ್ನೇಹಿತರು. ಹೀಗಾಗಿ ಅವರ ಪತ್ರದ ಬಗ್ಗೆ ಅವರಿಗೇ ಕೇಳಬೇಕು. ಬಿ.ಎಲ್ ಸಂತೋಷ. ಆಪರೇಷನ್ ಕಮಲದಲ್ಲಿ ಡಾಕ್ಟರೇಟ್ ತಗೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

lokesh

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

2 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

6 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

6 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

7 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

7 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

7 hours ago