BREAKING NEWS

ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುತ್ತೇವೆ : ಕೆಎಸ್‍ಆರ್ ಟಿಸಿ

ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್‍ಆರ್ ಟಿಸಿ ತಿಳಿಸಿದೆ.

ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್‍ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು 1.45 ಗಂಟೆಯಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯು ಬಸ್ಸಿನ ಬಲಭಾಗದ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಹೊಡೆದು ಅಪಘಾತವಾಗಿದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿಯ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ ಎಂದು ಪ್ರಕಟಣೆಯಲ್ಲಿ ಕೆಎಸ್‍ಆರ್ ಟಿಸಿ ಹೇಳಿದೆ.

ಹೆಚ್.ಡಿ.ಕೋಟೆ ತಾಲೂಕು ಮಾಗುಡಿಲು ನಿವಾಸಿ ಶಾಂತ ಕುಮಾರಿ(33) ಎಂಬುವರ ಬಲಗೈ ತುಂಡಾಗಿದೆ. ನಂಜನಗೂಡು ತಾಲೂಕು ಹಾಗೂ ಹುಲ್ಲಹಳ್ಳಿ ನಿವಾಸಿ ರಾಜಮ್ಮ (50) ಅವರ ಬಲಗೈಗೆ ತೀವ್ರ ಪೆಟ್ಟಾಗಿದೆ. ನಿಗಮದ ಅಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‍ಐ.ಆರ್ ದಾಖಲಾಗಿದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಲ್ಲ ಎಂದು ಕೆಎಸ್‍ಆರ್ ಟಿಸಿ ಸ್ಪಷ್ಟಪಡಿಸಿದೆ.

lokesh

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

2 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

2 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

2 hours ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

2 hours ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

2 hours ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

2 hours ago