BREAKING NEWS

ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುತ್ತೇವೆ : ಕೆಎಸ್‍ಆರ್ ಟಿಸಿ

ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್‍ಆರ್ ಟಿಸಿ ತಿಳಿಸಿದೆ.

ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್‍ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು 1.45 ಗಂಟೆಯಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯು ಬಸ್ಸಿನ ಬಲಭಾಗದ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಹೊಡೆದು ಅಪಘಾತವಾಗಿದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿಯ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ ಎಂದು ಪ್ರಕಟಣೆಯಲ್ಲಿ ಕೆಎಸ್‍ಆರ್ ಟಿಸಿ ಹೇಳಿದೆ.

ಹೆಚ್.ಡಿ.ಕೋಟೆ ತಾಲೂಕು ಮಾಗುಡಿಲು ನಿವಾಸಿ ಶಾಂತ ಕುಮಾರಿ(33) ಎಂಬುವರ ಬಲಗೈ ತುಂಡಾಗಿದೆ. ನಂಜನಗೂಡು ತಾಲೂಕು ಹಾಗೂ ಹುಲ್ಲಹಳ್ಳಿ ನಿವಾಸಿ ರಾಜಮ್ಮ (50) ಅವರ ಬಲಗೈಗೆ ತೀವ್ರ ಪೆಟ್ಟಾಗಿದೆ. ನಿಗಮದ ಅಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‍ಐ.ಆರ್ ದಾಖಲಾಗಿದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಲ್ಲ ಎಂದು ಕೆಎಸ್‍ಆರ್ ಟಿಸಿ ಸ್ಪಷ್ಟಪಡಿಸಿದೆ.

lokesh

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago