BREAKING NEWS

ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುತ್ತೇವೆ : ಕೆಎಸ್‍ಆರ್ ಟಿಸಿ

ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್‍ಆರ್ ಟಿಸಿ ತಿಳಿಸಿದೆ.

ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್‍ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು 1.45 ಗಂಟೆಯಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯು ಬಸ್ಸಿನ ಬಲಭಾಗದ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಹೊಡೆದು ಅಪಘಾತವಾಗಿದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿಯ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ ಎಂದು ಪ್ರಕಟಣೆಯಲ್ಲಿ ಕೆಎಸ್‍ಆರ್ ಟಿಸಿ ಹೇಳಿದೆ.

ಹೆಚ್.ಡಿ.ಕೋಟೆ ತಾಲೂಕು ಮಾಗುಡಿಲು ನಿವಾಸಿ ಶಾಂತ ಕುಮಾರಿ(33) ಎಂಬುವರ ಬಲಗೈ ತುಂಡಾಗಿದೆ. ನಂಜನಗೂಡು ತಾಲೂಕು ಹಾಗೂ ಹುಲ್ಲಹಳ್ಳಿ ನಿವಾಸಿ ರಾಜಮ್ಮ (50) ಅವರ ಬಲಗೈಗೆ ತೀವ್ರ ಪೆಟ್ಟಾಗಿದೆ. ನಿಗಮದ ಅಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‍ಐ.ಆರ್ ದಾಖಲಾಗಿದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಲ್ಲ ಎಂದು ಕೆಎಸ್‍ಆರ್ ಟಿಸಿ ಸ್ಪಷ್ಟಪಡಿಸಿದೆ.

lokesh

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

6 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

8 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago