BREAKING NEWS

ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ: ಹಿಂದಿ ಹೇರಿಕೆಗೆ ಸ್ಟಾಲಿನ್ ಖಂಡನೆ

ಚೆನ್ನೈ: ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ.

ಟ್ವೀಟ್ ನಲ್ಲಿ ಶಾ ಅವರ ಅಭಿಪ್ರಾಯವನ್ನು ಆಕ್ಷೇಪಿಸಿರುವ ಸ್ಟಾಲಿನ್ ಹಿಂದಿ ಸ್ವೀಕಾರಕ್ಕೆ ಅವರ ಒತ್ತನ್ನು ಟೀಕಿಸಿದ್ದಾರೆ. ‘ಇದು ಹಿಂದಿ ಮಾತನಾಡದವರನ್ನು ದಮನಿಸುವ ರಾಜಾರೋಷ ಪ್ರಯತ್ನವಾಗಿದೆ. ತಮಿಳುನಾಡು ಯಾವುದೇ ರೂಪದಲ್ಲಿ ಹಿಂದಿಯ ಪ್ರಾಬಲ್ಯ ಮತ್ತು ಹೇರಿಕೆಯನ್ನು ವಿರೋಧಿಸುತ್ತದೆ, ಏಕೆಂದರೆ ಅದು ಇಂತಹ ಕ್ರಮವನ್ನು ಅನುಮೋದಿಸುವ ರಾಜ್ಯವಲ್ಲ. ನಮ್ಮ ಭಾಷೆ ಮತ್ತು ಪರಂಪರೆ ನಮ್ಮನ್ನು ವ್ಯಾಖ್ಯಾನಿಸುತ್ತವೆ. ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ. ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಂತೆ ಹಲವಾರು ರಾಜ್ಯಗಳೂ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿವೆ. ಹಿಂದಿ ಹೇರಿಕೆಗೆ ಹೆಚ್ಚುತ್ತಿರುವ ಪ್ರತಿರೋಧವನ್ನು ಗಮನಕ್ಕೆ ತೆಗೆದುಕೊಳ್ಳಿ ’ ಎಂದು ಅವರು ಹೇಳಿದ್ದಾರೆ.

1965ರ ಹಿಂದಿ ಹೇರಿಕೆ ವಿರುದ್ಧ ಆಂದೋಲನದ ಬೆಂಕಿಯನ್ನು ಮತ್ತೆ ಹೊತ್ತಿಸುವುದು ಅವಿವೇಕದ ನಡೆಯಾಗುತ್ತದೆ ಎಂದೂ ಎಚ್ಚರಿಕೆ ನೀಡಿರುವ ಸ್ಟಾಲಿನ್, ಬಿಜೆಪಿ ನಾಯಕರು ಅನುಸರಿಸುತ್ತಿರುವ ಸೋಗಿನ ರಾಜಕೀಯದ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ. ತಮಿಳುನಾಡಿನಲ್ಲಿ ತಮಿಳನ್ನು ಪ್ರಾಚೀನ ಭಾಷೆ ಎಂದು ಪ್ರಶಂಸಿಸುವ ಅವರು ದಿಲ್ಲಿಯನ್ನು ತಲುಪಿದಾಗ ವಿಷವನ್ನು ಕಾರುತ್ತಾರೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.

ಈ ನಡುವೆ ಪಿಎಂಕೆ ಸ್ಥಾಪಕ ಎಸ್.ರಾಮದಾಸ್ ಅವರೂ ಶಾ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ. ಶಾ ಹೇಳಿಕೆಯು ಹಿಂದಿ ಭಾಷೆಯಲ್ಲಿ ಅವರ ವಿಶ್ವಾಸವನ್ನು ತೋರಿಸುವುದಿಲ್ಲ, ಬದಲಿಗೆ ಹಿಂದಿ ಹೇರುವ ಅವರ ಆಶಯವನ್ನು ಬಹಿರಂಗಗೊಳಿಸಿದೆ. ಹಿಂದಿಯನ್ನು ಹೇರುವ ಪ್ರಯತ್ನಗಳು ಭೂತಕಾಲದಂತೆ ಭವಿಷ್ಯದಲ್ಲಿಯೂ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

9 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago