BREAKING NEWS

ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ: ಹಿಂದಿ ಹೇರಿಕೆಗೆ ಸ್ಟಾಲಿನ್ ಖಂಡನೆ

ಚೆನ್ನೈ: ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ.

ಟ್ವೀಟ್ ನಲ್ಲಿ ಶಾ ಅವರ ಅಭಿಪ್ರಾಯವನ್ನು ಆಕ್ಷೇಪಿಸಿರುವ ಸ್ಟಾಲಿನ್ ಹಿಂದಿ ಸ್ವೀಕಾರಕ್ಕೆ ಅವರ ಒತ್ತನ್ನು ಟೀಕಿಸಿದ್ದಾರೆ. ‘ಇದು ಹಿಂದಿ ಮಾತನಾಡದವರನ್ನು ದಮನಿಸುವ ರಾಜಾರೋಷ ಪ್ರಯತ್ನವಾಗಿದೆ. ತಮಿಳುನಾಡು ಯಾವುದೇ ರೂಪದಲ್ಲಿ ಹಿಂದಿಯ ಪ್ರಾಬಲ್ಯ ಮತ್ತು ಹೇರಿಕೆಯನ್ನು ವಿರೋಧಿಸುತ್ತದೆ, ಏಕೆಂದರೆ ಅದು ಇಂತಹ ಕ್ರಮವನ್ನು ಅನುಮೋದಿಸುವ ರಾಜ್ಯವಲ್ಲ. ನಮ್ಮ ಭಾಷೆ ಮತ್ತು ಪರಂಪರೆ ನಮ್ಮನ್ನು ವ್ಯಾಖ್ಯಾನಿಸುತ್ತವೆ. ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ. ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಂತೆ ಹಲವಾರು ರಾಜ್ಯಗಳೂ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿವೆ. ಹಿಂದಿ ಹೇರಿಕೆಗೆ ಹೆಚ್ಚುತ್ತಿರುವ ಪ್ರತಿರೋಧವನ್ನು ಗಮನಕ್ಕೆ ತೆಗೆದುಕೊಳ್ಳಿ ’ ಎಂದು ಅವರು ಹೇಳಿದ್ದಾರೆ.

1965ರ ಹಿಂದಿ ಹೇರಿಕೆ ವಿರುದ್ಧ ಆಂದೋಲನದ ಬೆಂಕಿಯನ್ನು ಮತ್ತೆ ಹೊತ್ತಿಸುವುದು ಅವಿವೇಕದ ನಡೆಯಾಗುತ್ತದೆ ಎಂದೂ ಎಚ್ಚರಿಕೆ ನೀಡಿರುವ ಸ್ಟಾಲಿನ್, ಬಿಜೆಪಿ ನಾಯಕರು ಅನುಸರಿಸುತ್ತಿರುವ ಸೋಗಿನ ರಾಜಕೀಯದ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ. ತಮಿಳುನಾಡಿನಲ್ಲಿ ತಮಿಳನ್ನು ಪ್ರಾಚೀನ ಭಾಷೆ ಎಂದು ಪ್ರಶಂಸಿಸುವ ಅವರು ದಿಲ್ಲಿಯನ್ನು ತಲುಪಿದಾಗ ವಿಷವನ್ನು ಕಾರುತ್ತಾರೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.

ಈ ನಡುವೆ ಪಿಎಂಕೆ ಸ್ಥಾಪಕ ಎಸ್.ರಾಮದಾಸ್ ಅವರೂ ಶಾ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ. ಶಾ ಹೇಳಿಕೆಯು ಹಿಂದಿ ಭಾಷೆಯಲ್ಲಿ ಅವರ ವಿಶ್ವಾಸವನ್ನು ತೋರಿಸುವುದಿಲ್ಲ, ಬದಲಿಗೆ ಹಿಂದಿ ಹೇರುವ ಅವರ ಆಶಯವನ್ನು ಬಹಿರಂಗಗೊಳಿಸಿದೆ. ಹಿಂದಿಯನ್ನು ಹೇರುವ ಪ್ರಯತ್ನಗಳು ಭೂತಕಾಲದಂತೆ ಭವಿಷ್ಯದಲ್ಲಿಯೂ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

andolanait

Recent Posts

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

20 mins ago

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

1 hour ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

2 hours ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

2 hours ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago