BREAKING NEWS

ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ: ಹಿಂದಿ ಹೇರಿಕೆಗೆ ಸ್ಟಾಲಿನ್ ಖಂಡನೆ

ಚೆನ್ನೈ: ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ.

ಟ್ವೀಟ್ ನಲ್ಲಿ ಶಾ ಅವರ ಅಭಿಪ್ರಾಯವನ್ನು ಆಕ್ಷೇಪಿಸಿರುವ ಸ್ಟಾಲಿನ್ ಹಿಂದಿ ಸ್ವೀಕಾರಕ್ಕೆ ಅವರ ಒತ್ತನ್ನು ಟೀಕಿಸಿದ್ದಾರೆ. ‘ಇದು ಹಿಂದಿ ಮಾತನಾಡದವರನ್ನು ದಮನಿಸುವ ರಾಜಾರೋಷ ಪ್ರಯತ್ನವಾಗಿದೆ. ತಮಿಳುನಾಡು ಯಾವುದೇ ರೂಪದಲ್ಲಿ ಹಿಂದಿಯ ಪ್ರಾಬಲ್ಯ ಮತ್ತು ಹೇರಿಕೆಯನ್ನು ವಿರೋಧಿಸುತ್ತದೆ, ಏಕೆಂದರೆ ಅದು ಇಂತಹ ಕ್ರಮವನ್ನು ಅನುಮೋದಿಸುವ ರಾಜ್ಯವಲ್ಲ. ನಮ್ಮ ಭಾಷೆ ಮತ್ತು ಪರಂಪರೆ ನಮ್ಮನ್ನು ವ್ಯಾಖ್ಯಾನಿಸುತ್ತವೆ. ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ. ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಂತೆ ಹಲವಾರು ರಾಜ್ಯಗಳೂ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿವೆ. ಹಿಂದಿ ಹೇರಿಕೆಗೆ ಹೆಚ್ಚುತ್ತಿರುವ ಪ್ರತಿರೋಧವನ್ನು ಗಮನಕ್ಕೆ ತೆಗೆದುಕೊಳ್ಳಿ ’ ಎಂದು ಅವರು ಹೇಳಿದ್ದಾರೆ.

1965ರ ಹಿಂದಿ ಹೇರಿಕೆ ವಿರುದ್ಧ ಆಂದೋಲನದ ಬೆಂಕಿಯನ್ನು ಮತ್ತೆ ಹೊತ್ತಿಸುವುದು ಅವಿವೇಕದ ನಡೆಯಾಗುತ್ತದೆ ಎಂದೂ ಎಚ್ಚರಿಕೆ ನೀಡಿರುವ ಸ್ಟಾಲಿನ್, ಬಿಜೆಪಿ ನಾಯಕರು ಅನುಸರಿಸುತ್ತಿರುವ ಸೋಗಿನ ರಾಜಕೀಯದ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ. ತಮಿಳುನಾಡಿನಲ್ಲಿ ತಮಿಳನ್ನು ಪ್ರಾಚೀನ ಭಾಷೆ ಎಂದು ಪ್ರಶಂಸಿಸುವ ಅವರು ದಿಲ್ಲಿಯನ್ನು ತಲುಪಿದಾಗ ವಿಷವನ್ನು ಕಾರುತ್ತಾರೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.

ಈ ನಡುವೆ ಪಿಎಂಕೆ ಸ್ಥಾಪಕ ಎಸ್.ರಾಮದಾಸ್ ಅವರೂ ಶಾ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ. ಶಾ ಹೇಳಿಕೆಯು ಹಿಂದಿ ಭಾಷೆಯಲ್ಲಿ ಅವರ ವಿಶ್ವಾಸವನ್ನು ತೋರಿಸುವುದಿಲ್ಲ, ಬದಲಿಗೆ ಹಿಂದಿ ಹೇರುವ ಅವರ ಆಶಯವನ್ನು ಬಹಿರಂಗಗೊಳಿಸಿದೆ. ಹಿಂದಿಯನ್ನು ಹೇರುವ ಪ್ರಯತ್ನಗಳು ಭೂತಕಾಲದಂತೆ ಭವಿಷ್ಯದಲ್ಲಿಯೂ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago