BREAKING NEWS

ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ನವದೆಹಲಿ : ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿಗೆ ತತ್ವಾರ ಇದೆ. ಹೀಗಾಗಿ ತಮಿಳುನಾಡಿಗೆ ಈ ಬಾರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಳೆ ಕೊರತೆಯಿದೆ. ಕೆಆರ್ ಎಸ್ ಸೇರಿದಂತೆ ಎಲ್ಲಾ ಜಲಾಯಶಗಳಲ್ಲೂ ನೀರಿನ ಸಂಗ್ರಹ ಕಡಿಮೆ ಇದೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಿಗೆ ಕುಡಿಯುವ ನೀರಿಲ್ಲ. ಹೀಗಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿಯ ಸೂಚನೆ ಹೊರತಾಗಿಯೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಎಲ್ಲಾ ರಾಜ್ಯಗಳ ನೀರಾವರಿ ಇಲಾಖೆಯ ಅಕಾರಿಗಳ ಸಭೆ ರಾಜ್ಯದಲ್ಲಿ ನಡೆಸಲು ನಿಗದಿಯಾಗಿದೆ. ಬಹುತೇಕ ಜು.8 ಅಥವಾ 9ರಂದು ಸಭೆ ನಡೆಯಬಹುದು. ಅದನ್ನು ಬೆಂಗಳೂರಿನಲ್ಲೇ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ ಕೆಆರ್ ಎಸ್ ನಲ್ಲಿ ನೀರಿನ ಕೊರತೆ ಇರುವುದನ್ನು ಅಕಾರಿಗಳು ಕಣ್ಣಾರೆ ನೋಡಲಿ ಎಂಬ ಉದ್ದೇಶಕ್ಕಾಗಿ ಕೆಆರ್ ಎಸ್ ನಲ್ಲಿ ನಡೆಸುವಂತೆ ಸಲಹೆ ನೀಡಿರುವುದಾಗಿ ಹೇಳಿದರು.

ಬೆಂಗಳೂರಿಗೆ ನೀರು ಪೂರೈಸುವ ಹಳೆಯ ಪೈಪ್‍ಲೈನ್ ಮಾರ್ಗ ದುರಸ್ಥಿ ಕಾಮಗಾರಿ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ನೀರಿನ ಸಮಸ್ಯೆ ಇಲ್ಲ. ಆದರೆ ಜಲಾಶಯಗಳ ನೀರಿನ ಸಂಗ್ರಹದ ಆಧಾರದ ಮೇಲೆ ತಮಿಳುನಾಡಿಗೆ ನೀರು ಬಿಡುವಷ್ಟು ಸಾಮಥ್ಯವಿಲ್ಲ ಎಂದು ಹೇಳಿದರು.

ಮೇಕೆದಾಟು ಯೋಜನೆಯ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ಆ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ಯೋಜನೆ ವಿಳಂಬವಾದಷ್ಟು ಅಂದಾಜು ವೆಚ್ಚ ದುಬಾರಿಯಾಗಿ ರಾಜ್ಯಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಮೊದಲು 9 ಸಾವಿರ ಕೋಟಿ ರೂ.ನಷ್ಟಿದ್ದ ಅಂದಾಜು ವೆಚ್ಚ 13 ಸಾವಿರ ಕೋಟಿ ರೂ.ಗೆ ಹೆಚ್ಚಾಗಿದೆ. ಈ ಮಧ್ಯೆ ತಮಿಳುನಾಡಿನವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಬಾಕಿ ಉಳಿದ ಬೀಗದ ಕೈಗಳು ರಾಜ್ಯಸರ್ಕಾರದ ಬಳಿ ಇವೆ.

ಕಾವೇರಿ ನದಿ ಪಾತ್ರದಲ್ಲಿ 700 ಟಿಎಂಸಿ ನೀರು ಸಮುದ್ರಕ್ಕೆ ಹರಿದುಹೋಗುತ್ತಿದೆ. ಅದರಲ್ಲಿ ನಾವು ಬಳಕೆ ಮಾಡಿಕೊಳ್ಳುತ್ತಿರುವುದು 40 ಟಿಎಂಸಿ ಮಾತ್ರ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ನಷ್ಟವಾಗುವುದಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕಾರಣ ಹೊರತಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಬ್ರಾಂಡ್ ಬೆಂಗಳೂರು ಕುರಿತಂತೆ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಲಾಗಿದ್ದು, ನಿಗದಿತ ಕಾಲಾವಧಿಯಲ್ಲಿ ಸಾವಿರಾರು ಸಲಹೆಗಳು ಬಂದಿವೆ. ಅದನ್ನು ಪರಿಷ್ಕರಿಸಲು ಮತ್ತು ಸೂಕ್ತವಾದವುಗಳನ್ನು ಅನುಷ್ಠಾನಕ್ಕೆ ಪರಿಶೀಲಿಸಲು ಸಮಿತಿ ರಚನೆ ಮಾಡುತ್ತೇವೆ. ಸಲಹೆ ನೀಡಲು ಮತ್ತೆ 15 ದಿನಗಳ ಕಾಲಾವಕಾಶ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago