BREAKING NEWS

ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ನವದೆಹಲಿ : ಕರ್ನಾಟಕದ ಜಲಾಶಯಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿಗೆ ತತ್ವಾರ ಇದೆ. ಹೀಗಾಗಿ ತಮಿಳುನಾಡಿಗೆ ಈ ಬಾರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಳೆ ಕೊರತೆಯಿದೆ. ಕೆಆರ್ ಎಸ್ ಸೇರಿದಂತೆ ಎಲ್ಲಾ ಜಲಾಯಶಗಳಲ್ಲೂ ನೀರಿನ ಸಂಗ್ರಹ ಕಡಿಮೆ ಇದೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಿಗೆ ಕುಡಿಯುವ ನೀರಿಲ್ಲ. ಹೀಗಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿಯ ಸೂಚನೆ ಹೊರತಾಗಿಯೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಎಲ್ಲಾ ರಾಜ್ಯಗಳ ನೀರಾವರಿ ಇಲಾಖೆಯ ಅಕಾರಿಗಳ ಸಭೆ ರಾಜ್ಯದಲ್ಲಿ ನಡೆಸಲು ನಿಗದಿಯಾಗಿದೆ. ಬಹುತೇಕ ಜು.8 ಅಥವಾ 9ರಂದು ಸಭೆ ನಡೆಯಬಹುದು. ಅದನ್ನು ಬೆಂಗಳೂರಿನಲ್ಲೇ ನಡೆಸಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ ಕೆಆರ್ ಎಸ್ ನಲ್ಲಿ ನೀರಿನ ಕೊರತೆ ಇರುವುದನ್ನು ಅಕಾರಿಗಳು ಕಣ್ಣಾರೆ ನೋಡಲಿ ಎಂಬ ಉದ್ದೇಶಕ್ಕಾಗಿ ಕೆಆರ್ ಎಸ್ ನಲ್ಲಿ ನಡೆಸುವಂತೆ ಸಲಹೆ ನೀಡಿರುವುದಾಗಿ ಹೇಳಿದರು.

ಬೆಂಗಳೂರಿಗೆ ನೀರು ಪೂರೈಸುವ ಹಳೆಯ ಪೈಪ್‍ಲೈನ್ ಮಾರ್ಗ ದುರಸ್ಥಿ ಕಾಮಗಾರಿ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ನೀರಿನ ಸಮಸ್ಯೆ ಇಲ್ಲ. ಆದರೆ ಜಲಾಶಯಗಳ ನೀರಿನ ಸಂಗ್ರಹದ ಆಧಾರದ ಮೇಲೆ ತಮಿಳುನಾಡಿಗೆ ನೀರು ಬಿಡುವಷ್ಟು ಸಾಮಥ್ಯವಿಲ್ಲ ಎಂದು ಹೇಳಿದರು.

ಮೇಕೆದಾಟು ಯೋಜನೆಯ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ಆ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ಯೋಜನೆ ವಿಳಂಬವಾದಷ್ಟು ಅಂದಾಜು ವೆಚ್ಚ ದುಬಾರಿಯಾಗಿ ರಾಜ್ಯಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಮೊದಲು 9 ಸಾವಿರ ಕೋಟಿ ರೂ.ನಷ್ಟಿದ್ದ ಅಂದಾಜು ವೆಚ್ಚ 13 ಸಾವಿರ ಕೋಟಿ ರೂ.ಗೆ ಹೆಚ್ಚಾಗಿದೆ. ಈ ಮಧ್ಯೆ ತಮಿಳುನಾಡಿನವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಬಾಕಿ ಉಳಿದ ಬೀಗದ ಕೈಗಳು ರಾಜ್ಯಸರ್ಕಾರದ ಬಳಿ ಇವೆ.

ಕಾವೇರಿ ನದಿ ಪಾತ್ರದಲ್ಲಿ 700 ಟಿಎಂಸಿ ನೀರು ಸಮುದ್ರಕ್ಕೆ ಹರಿದುಹೋಗುತ್ತಿದೆ. ಅದರಲ್ಲಿ ನಾವು ಬಳಕೆ ಮಾಡಿಕೊಳ್ಳುತ್ತಿರುವುದು 40 ಟಿಎಂಸಿ ಮಾತ್ರ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ನಷ್ಟವಾಗುವುದಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕಾರಣ ಹೊರತಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಬ್ರಾಂಡ್ ಬೆಂಗಳೂರು ಕುರಿತಂತೆ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಲಾಗಿದ್ದು, ನಿಗದಿತ ಕಾಲಾವಧಿಯಲ್ಲಿ ಸಾವಿರಾರು ಸಲಹೆಗಳು ಬಂದಿವೆ. ಅದನ್ನು ಪರಿಷ್ಕರಿಸಲು ಮತ್ತು ಸೂಕ್ತವಾದವುಗಳನ್ನು ಅನುಷ್ಠಾನಕ್ಕೆ ಪರಿಶೀಲಿಸಲು ಸಮಿತಿ ರಚನೆ ಮಾಡುತ್ತೇವೆ. ಸಲಹೆ ನೀಡಲು ಮತ್ತೆ 15 ದಿನಗಳ ಕಾಲಾವಕಾಶ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

2 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago