ಮೈಸೂರು: ನಾನು, ಎಚ್.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕಾಂಗ್ರೆಸ್ ಪಾಳಯದಲ್ಲಿದ್ದಾಗ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಂಡಿದ್ದಾರೆ.
ಎಚ್.ಸಿ ಮಹದೇವಪ್ಪ ಹಾಗೂ ನಾನು ಪರಸ್ಪರ ಭೇಟಿಯಾಗಿ ಬಹಳ ವರ್ಷಗಳಾಗಿತ್ತು. ನಾನು ಕಾಂಗ್ರೆಸ್ ಬಿಡುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದೆ. ಬಳಿಕ ಇದೇ ಮೊದಲು ಭೇಟಿಯಾಗುತ್ತಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಇವರ ಜೊತೆಗೆ ವೆಂಕಟೇಶ್, ಗಣೇಶ್ ಪ್ರಸಾದ್ ಯತೀಂದ್ರ ಎಲ್ಲರೂ ಭೇಟಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ಸೂಚಿಸುಂತೆ ಅಭಿಮಾನಿಗಳಿಗೆ ಸೂಚಿಸಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ಈ ಬಗ್ಗೆ ಚರ್ಚೆಯಾದ ಸಮಯದಲ್ಲಿ ಅಭಿಮಾನಿಗಳ ಸಲಹೆ ಪಡೆದು ಅದಕ್ಕೆ ಮನ್ನಣೆ ನೀಡಲಾಗುವುದು ಎಂದು ಪ್ರಸಾದ್ ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ನಮ್ಮ ಅಭಿಮಾನಿಗಳಿಗೆ ಬಿಟ್ಟಿದ್ದೇನೆ. ಎಲ್ಲರು ಸಂಪೂರ್ಣವಾಗಿ ಸ್ವತಂತ್ರರಾಗಿದ್ದಾರೆ. ಯೋಚಿಸುವ ಶಕ್ತಿ ಅವರಿಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಬೆಂಬಲ ನೀಡುತ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ರಾಜಕಾರಣವೇ ಸಂಪೂರ್ಣ ಕಲುಷಿತವಾಗಿದೆ. ಕೇವಲ ಒಂದು ಪಕ್ಷಕ್ಕೆ, ಪಕ್ಷದ ಅಭ್ಯರ್ಥಿಗಳಿಗೆ, ಮತದಾರರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಕಡೆಯೂ ಕಲುಷಿತವಾಗಿದೆ. ಇವುಗಳ ಬದಲಾವಣೆ ಮತ್ತು ಸುಧಾರಣೆ ಆಗಬೇಕಿದೆ. ಇದು ಈಗಿನ ರಾಜಕೀಯ ಪಕ್ಷಗಳಿಗೂ ದೊಡ್ಡ ಸವಾಲಾಗಿದೆ. ಮತ್ತು ಮತದಾರರೂ ಆಮಿಷಗಳಗೆ ಒಳಗಾಗದೇ ಸುಧಾರಣೆ ನೀಡಬೇಕು ಎಂದು ವಿವರಿಸಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…