ಮೈಸೂರು: ನಾನು, ಎಚ್.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕಾಂಗ್ರೆಸ್ ಪಾಳಯದಲ್ಲಿದ್ದಾಗ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಂಡಿದ್ದಾರೆ.
ಎಚ್.ಸಿ ಮಹದೇವಪ್ಪ ಹಾಗೂ ನಾನು ಪರಸ್ಪರ ಭೇಟಿಯಾಗಿ ಬಹಳ ವರ್ಷಗಳಾಗಿತ್ತು. ನಾನು ಕಾಂಗ್ರೆಸ್ ಬಿಡುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದೆ. ಬಳಿಕ ಇದೇ ಮೊದಲು ಭೇಟಿಯಾಗುತ್ತಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಇವರ ಜೊತೆಗೆ ವೆಂಕಟೇಶ್, ಗಣೇಶ್ ಪ್ರಸಾದ್ ಯತೀಂದ್ರ ಎಲ್ಲರೂ ಭೇಟಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ಸೂಚಿಸುಂತೆ ಅಭಿಮಾನಿಗಳಿಗೆ ಸೂಚಿಸಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ಈ ಬಗ್ಗೆ ಚರ್ಚೆಯಾದ ಸಮಯದಲ್ಲಿ ಅಭಿಮಾನಿಗಳ ಸಲಹೆ ಪಡೆದು ಅದಕ್ಕೆ ಮನ್ನಣೆ ನೀಡಲಾಗುವುದು ಎಂದು ಪ್ರಸಾದ್ ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ನಮ್ಮ ಅಭಿಮಾನಿಗಳಿಗೆ ಬಿಟ್ಟಿದ್ದೇನೆ. ಎಲ್ಲರು ಸಂಪೂರ್ಣವಾಗಿ ಸ್ವತಂತ್ರರಾಗಿದ್ದಾರೆ. ಯೋಚಿಸುವ ಶಕ್ತಿ ಅವರಿಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಬೆಂಬಲ ನೀಡುತ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ರಾಜಕಾರಣವೇ ಸಂಪೂರ್ಣ ಕಲುಷಿತವಾಗಿದೆ. ಕೇವಲ ಒಂದು ಪಕ್ಷಕ್ಕೆ, ಪಕ್ಷದ ಅಭ್ಯರ್ಥಿಗಳಿಗೆ, ಮತದಾರರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಕಡೆಯೂ ಕಲುಷಿತವಾಗಿದೆ. ಇವುಗಳ ಬದಲಾವಣೆ ಮತ್ತು ಸುಧಾರಣೆ ಆಗಬೇಕಿದೆ. ಇದು ಈಗಿನ ರಾಜಕೀಯ ಪಕ್ಷಗಳಿಗೂ ದೊಡ್ಡ ಸವಾಲಾಗಿದೆ. ಮತ್ತು ಮತದಾರರೂ ಆಮಿಷಗಳಗೆ ಒಳಗಾಗದೇ ಸುಧಾರಣೆ ನೀಡಬೇಕು ಎಂದು ವಿವರಿಸಿದರು.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…