BREAKING NEWS

ಬೇರೆ-ಬೇರೆ ಪಕ್ಷದಲ್ಲಿದ್ದೂ ನಮ್ಮಲ್ಲಿ ಯಾವುದೇ ವೈರತ್ವವಿಲ್ಲ: ಸಂಸದ ಶ್ರೀನಿವಾಸ್‌ ಪ್ರಸಾದ್‌

ಮೈಸೂರು: ನಾನು, ಎಚ್‌.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಹೇಳಿದರು.

ನಗರದಲ್ಲಿಂದು  ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕಾಂಗ್ರೆಸ್‌ ಪಾಳಯದಲ್ಲಿದ್ದಾಗ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಂಡಿದ್ದಾರೆ.

ಎಚ್‌.ಸಿ ಮಹದೇವಪ್ಪ ಹಾಗೂ ನಾನು ಪರಸ್ಪರ ಭೇಟಿಯಾಗಿ ಬಹಳ ವರ್ಷಗಳಾಗಿತ್ತು. ನಾನು ಕಾಂಗ್ರೆಸ್‌ ಬಿಡುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದೆ. ಬಳಿಕ ಇದೇ ಮೊದಲು ಭೇಟಿಯಾಗುತ್ತಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಇವರ ಜೊತೆಗೆ ವೆಂಕಟೇಶ್‌, ಗಣೇಶ್‌ ಪ್ರಸಾದ್‌ ಯತೀಂದ್ರ ಎಲ್ಲರೂ ಭೇಟಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ಸೂಚಿಸುಂತೆ ಅಭಿಮಾನಿಗಳಿಗೆ ಸೂಚಿಸಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್‌, ಈ ಬಗ್ಗೆ ಚರ್ಚೆಯಾದ ಸಮಯದಲ್ಲಿ ಅಭಿಮಾನಿಗಳ ಸಲಹೆ ಪಡೆದು ಅದಕ್ಕೆ ಮನ್ನಣೆ ನೀಡಲಾಗುವುದು ಎಂದು ಪ್ರಸಾದ್‌ ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ನಮ್ಮ ಅಭಿಮಾನಿಗಳಿಗೆ ಬಿಟ್ಟಿದ್ದೇನೆ. ಎಲ್ಲರು ಸಂಪೂರ್ಣವಾಗಿ ಸ್ವತಂತ್ರರಾಗಿದ್ದಾರೆ. ಯೋಚಿಸುವ ಶಕ್ತಿ ಅವರಿಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಬೆಂಬಲ ನೀಡುತ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇನ್ನು ರಾಜಕಾರಣವೇ ಸಂಪೂರ್ಣ ಕಲುಷಿತವಾಗಿದೆ. ಕೇವಲ ಒಂದು ಪಕ್ಷಕ್ಕೆ, ಪಕ್ಷದ ಅಭ್ಯರ್ಥಿಗಳಿಗೆ, ಮತದಾರರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಕಡೆಯೂ ಕಲುಷಿತವಾಗಿದೆ. ಇವುಗಳ ಬದಲಾವಣೆ ಮತ್ತು ಸುಧಾರಣೆ ಆಗಬೇಕಿದೆ. ಇದು ಈಗಿನ ರಾಜಕೀಯ ಪಕ್ಷಗಳಿಗೂ ದೊಡ್ಡ ಸವಾಲಾಗಿದೆ. ಮತ್ತು ಮತದಾರರೂ ಆಮಿಷಗಳಗೆ ಒಳಗಾಗದೇ ಸುಧಾರಣೆ ನೀಡಬೇಕು ಎಂದು ವಿವರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

26 mins ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

11 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

14 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

15 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

16 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

16 hours ago