ಮೈಸೂರು: ನಾನು, ಎಚ್.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕಾಂಗ್ರೆಸ್ ಪಾಳಯದಲ್ಲಿದ್ದಾಗ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಂಡಿದ್ದಾರೆ.
ಎಚ್.ಸಿ ಮಹದೇವಪ್ಪ ಹಾಗೂ ನಾನು ಪರಸ್ಪರ ಭೇಟಿಯಾಗಿ ಬಹಳ ವರ್ಷಗಳಾಗಿತ್ತು. ನಾನು ಕಾಂಗ್ರೆಸ್ ಬಿಡುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದೆ. ಬಳಿಕ ಇದೇ ಮೊದಲು ಭೇಟಿಯಾಗುತ್ತಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಇವರ ಜೊತೆಗೆ ವೆಂಕಟೇಶ್, ಗಣೇಶ್ ಪ್ರಸಾದ್ ಯತೀಂದ್ರ ಎಲ್ಲರೂ ಭೇಟಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ನಿರ್ಧಿಷ್ಟ ಪಕ್ಷಕ್ಕೆ ಬೆಂಬಲ ಸೂಚಿಸುಂತೆ ಅಭಿಮಾನಿಗಳಿಗೆ ಸೂಚಿಸಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ಈ ಬಗ್ಗೆ ಚರ್ಚೆಯಾದ ಸಮಯದಲ್ಲಿ ಅಭಿಮಾನಿಗಳ ಸಲಹೆ ಪಡೆದು ಅದಕ್ಕೆ ಮನ್ನಣೆ ನೀಡಲಾಗುವುದು ಎಂದು ಪ್ರಸಾದ್ ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಮತ ಚಲಾವಣೆ ಕುರಿತು ನಮ್ಮ ಅಭಿಮಾನಿಗಳಿಗೆ ಬಿಟ್ಟಿದ್ದೇನೆ. ಎಲ್ಲರು ಸಂಪೂರ್ಣವಾಗಿ ಸ್ವತಂತ್ರರಾಗಿದ್ದಾರೆ. ಯೋಚಿಸುವ ಶಕ್ತಿ ಅವರಿಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಬೆಂಬಲ ನೀಡುತ್ತಾರೋ ಅದು ಅವರಿಗೆ ಬಿಟ್ಟಿದ್ದು. ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ರಾಜಕಾರಣವೇ ಸಂಪೂರ್ಣ ಕಲುಷಿತವಾಗಿದೆ. ಕೇವಲ ಒಂದು ಪಕ್ಷಕ್ಕೆ, ಪಕ್ಷದ ಅಭ್ಯರ್ಥಿಗಳಿಗೆ, ಮತದಾರರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಕಡೆಯೂ ಕಲುಷಿತವಾಗಿದೆ. ಇವುಗಳ ಬದಲಾವಣೆ ಮತ್ತು ಸುಧಾರಣೆ ಆಗಬೇಕಿದೆ. ಇದು ಈಗಿನ ರಾಜಕೀಯ ಪಕ್ಷಗಳಿಗೂ ದೊಡ್ಡ ಸವಾಲಾಗಿದೆ. ಮತ್ತು ಮತದಾರರೂ ಆಮಿಷಗಳಗೆ ಒಳಗಾಗದೇ ಸುಧಾರಣೆ ನೀಡಬೇಕು ಎಂದು ವಿವರಿಸಿದರು.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…