BREAKING NEWS

‘ನಮಗೆ ಒಂದು ರಾಷ್ಟ್ರ-ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ-ಒಂದು ಶಿಕ್ಷಣ ಬೇಕು’: ಕೇಜ್ರಿವಾಲ್

ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ.

ಹರಿಯಾಣದ ಭಿವಾನಿಯಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್,  ಬಿಜೆಪಿ ಇದೀಗ ಒಂದು ರಾಷ್ಟ್ರ ಒಂದು ಚುನಾವಣೆ ಗಿಮ್ಮಿಕ್ ನೊಂದಿಗೆ ಬಂದಿದೆ. ಒಂದು ಅಥವಾ 10, 12 ಚುನಾವಣೆಗಳಿಂದ ನಮಗೆ ಏನು ಸಿಗುತ್ತದೆ.  ನಮಗೆ ‘ಒಂದು ರಾಷ್ಟ್ರ, ಒಂದು ಶಿಕ್ಷಣ’ ಬೇಕು. ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ಸಿಗಬೇಕು. ನಮಗೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಬೇಡ. ಒಂದು ಚುನಾವಣೆ ಅಥವಾ 1000 ಚುನಾವಣೆಗಳು ನಮಗೆ ಮುಖ್ಯವಲ್ಲ ಎಂದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ ದೆಹಲಿ ಸಿಎಂ, ಇಂತಹ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ಏನು ಸಿಗುತ್ತದೆ ಎಂದು ಕುತೂಹಲ ವ್ಯಕ್ತಪಡಿಸಿದರು. “ದೇಶಕ್ಕೆ ಯಾವುದು ಮುಖ್ಯ?  ಎಂದು ಪ್ರಶ್ನಿಸಿದ ಅವರು, ಒಂದು ರಾಷ್ಟ್ರ ಒಂದು ಚುನಾವಣೆ ಅಥವಾ ಒಂದು ರಾಷ್ಟ್ರ ಒಂದು ಶಿಕ್ಷಣ (ಶ್ರೀಮಂತ ಅಥವಾ ಬಡವರು ಎಲ್ಲರಿಗೂ ಸಮಾನವಾದ ಉತ್ತಮ ಶಿಕ್ಷಣ)  ಒಂದು ರಾಷ್ಟ್ರ ಒಂದು ಟ್ವೀಟ್ ಮೆಂಟ್ ( ಶ್ರೀಮಂತ ಅಥವಾ ಬಡವ ಎಲ್ಲರಿಗೂ ಸಮಾನ ಗೌರವ) ಒಂದು ರಾಷ್ಟ್ರ ಒಂದು ಚುನಾವಣೆಯಿಂದ ಸಾಮಾನ್ಯ ಜನರು ಏನು ಪಡೆಯಲಿದ್ದಾರೆ ಎಂದು ಪ್ರಶ್ನಿಸಿದರು.

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ಕಾರ್ಯ ಸಾಧ್ಯತೆ ಕುರಿತು ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿಗೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ಅದರ ಪರ ಹಾಗೂ ವಿರುದ್ಧ ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಆಡಳಿತರೂಢ ಬಿಜೆಪಿ ಬೆಂಬಲಿಗರು ಬೆಂಬಲ ವ್ಯಕ್ತಪಡಿಸುತ್ತಿದ್ದರೆ, ವಿರೋಧಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

8 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago