ದೆಹಲಿ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು ಸುದೀರ್ಘವಾದ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.
ಚುನಾವಣಾ ಸಂದರ್ಭದಲ್ಲಿ ಹೇಗೆಲ್ಲ ಕಾರ್ಯ ನಿರ್ವಹಿಸಬೇಕು ಅಂತ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದ ಮೇಲೆ ನಾಳೆ (ಮಂಗಳವಾರ) ತಡರಾತ್ರಿ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.
ಇದೇ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಶಿಗ್ಗಾಂವಿದಲ್ಲಿ ಸ್ಪರ್ಧೆ ಮಾಡುತ್ತೇನೆ. ಬೇರೆ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.
ಅಲ್ಲದೇ ಹಾಲಿ ಶಾಸಕರಿಗೆ ಕೊಕ್ ನೀಡಲಾಗುತ್ತದೆ ಅನ್ನುವುದು ಉಹಾಪೋಹ. ನಮ್ಮ ಬಿಜೆಪಿಯಲ್ಲಿ ಕೆಲವು ಮಾನದಂಡಗಳಿವೆ. ಅದೇ ಪ್ರಕಾರ ನಾವು ಕೆಲಸ ಮಾಡುತ್ತೇವೆ ಎಂದರು.
ಭ್ರಷ್ಟಾಚಾರ ಆರೋಪಿಗಳಿಗೆ, ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡವರಿಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಕೆಲವು ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಅದರ ರೀತಿಯಲ್ಲೇ ಟಿಕೆಟ್ ಅಂತಿಮ ಆಗುತ್ತದೆ. ಎಲ್ಲ ಮಾನದಂಡದ ಬಗ್ಗೆ ಚರ್ಚೆ ಆಗಿದೆ, ಈ ಬಗ್ಗೆಯೂ ಚರ್ಚೆ ಆಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…