BREAKING NEWS

ಚುನಾವಣಾ ಪ್ರಚಾರದ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ

ದೆಹಲಿ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು ಸುದೀರ್ಘವಾದ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ಹೇಗೆಲ್ಲ ಕಾರ್ಯ ನಿರ್ವಹಿಸಬೇಕು ಅಂತ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದ ಮೇಲೆ ನಾಳೆ (ಮಂಗಳವಾರ)  ತಡರಾತ್ರಿ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ಇದೇ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಶಿಗ್ಗಾಂವಿದಲ್ಲಿ ಸ್ಪರ್ಧೆ ಮಾಡುತ್ತೇನೆ. ಬೇರೆ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಅಲ್ಲದೇ ಹಾಲಿ ಶಾಸಕರಿಗೆ ಕೊಕ್ ನೀಡಲಾಗುತ್ತದೆ ಅನ್ನುವುದು ಉಹಾಪೋಹ. ನಮ್ಮ ಬಿಜೆಪಿಯಲ್ಲಿ  ಕೆಲವು  ಮಾನದಂಡಗಳಿವೆ. ಅದೇ ಪ್ರಕಾರ ನಾವು ಕೆಲಸ ಮಾಡುತ್ತೇವೆ ಎಂದರು.

ಭ್ರಷ್ಟಾಚಾರ ಆರೋಪಿಗಳಿಗೆ, ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡವರಿಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಕೆಲವು ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಅದರ ರೀತಿಯಲ್ಲೇ ಟಿಕೆಟ್ ಅಂತಿಮ ಆಗುತ್ತದೆ. ಎಲ್ಲ ಮಾನದಂಡದ ಬಗ್ಗೆ ಚರ್ಚೆ ಆಗಿದೆ, ಈ ಬಗ್ಗೆಯೂ ಚರ್ಚೆ ಆಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

lokesh

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

20 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

20 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

20 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

20 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

20 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

20 hours ago