BREAKING NEWS

ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡುವಂತೆ ಮೊದಲು ಹೇಳಿದ್ದು ನಾವೇ : ಲಕ್ಷ್ಮಣ್‌

ಮೈಸೂರು: ‘ಇಲ್ಲಿನ ವಿಮಾನನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2015ರಲ್ಲೇ ಕೇಂದ್ರಕ್ಕೆ ಶಿಫಾರಸು ಮಾಡಿದೆ’ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.

ಮೈಸೂರು ವಿಮಾನನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂಬ ಹುಬ್ಬಳ್ಳಿ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಹೇಳಿಕೆ ವೈಯಕ್ತಿಕವಾದುದೇ ಹೊರತು, ಪಕ್ಷ ಅಥವಾ ಸರ್ಕಾರದ ನಿಲುವಲ್ಲ. ಅಭಿಮಾನದಿಂದ ಆ ಹೇಳಿಕೆ ನೀಡಿದ್ದಾರಷ್ಟೆ’ ಎಂದು ಸ್ಪಷ್ಟಪಡಿಸಿದರು.

‘ಟಿಪ್ಪು ಹೆಸರಿಡುತ್ತೇವೆ ಎಂದು ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅಥವಾ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರಾಗಲಿ ಹೇಳಿಲ್ಲ. ನಾವೂ ಕೇಳಿಲ್ಲ. ಹೀಗಿರುವಾಗ, ಸಂಸದ ಪ್ರತಾಪ ಸಿಂಹ ಅವರು ಈ ವಿಷಯದಲ್ಲೂ ರಾಜಕಾರಣ ಮಾಡುತ್ತಿರುವುದು ಹಾಗೂ ಟಿಪ‍್ಪು ಹೆಸರಿಡಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಖಂಡನೀಯ’ ಎಂದರು.

ಸಿದ್ದರಾಮಯ್ಯ ಅವರು 2015ರಲ್ಲೇ ಕೇಂದ್ರಕ್ಕೆ ಪತ್ರ ಬರೆದಿದ್ದರು. ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ಬಗ್ಗೆಯೂ ತಿಳಿಸಿದ್ದರು. ಆಗಿನಿಂದಲೂ ಕೇಂದ್ರ ಸರ್ಕಾರ ಮರುನಾಮಕರಣ ಮಾಡಲಿಲ್ಲವೇಕೆ?, ಸಂಸದರಾಗಿರುವ ಪ್ರತಾಪ ಸಿಂಹ ಒತ್ತಾಯಿಸಲಿಲ್ಲವೇಕೆ, ಎಂಟು ವರ್ಷಗಳಿಂದ ಅವರು ಎಲ್ಲಿ ಮಲಗಿದ್ದರು?’ ಎಂದು ಕೇಳಿದರು.

‘ಮೊದಲಿಗ ಶಿಫಾರಸು ಮಾಡಿದ್ದೇ ನಾವು. ಇದ್ಯಾವುದೂ ಗೊತ್ತಿಲ್ಲದೇ ಸಂಸದರು ವಿನಾಕಾರಣ ಆರೋಪಿಸುವುದು ಸರಿಯಲ್ಲ. ಶಿಫಾರಸು ಪತ್ರವನ್ನು ಮತ್ತೊಮ್ಮೆ ಕಳುಹಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

19 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

19 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

20 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

20 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

20 hours ago