BREAKING NEWS

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಪಠ್ಯಕ್ರಗಳಲ್ಲಿರುವ ಅವೈಜ್ಞಾನಿಕ ಹಾಗೂ ಅಸಂವಿಧಾನ ಅಂಶಗಳನ್ನು ಪರಿಷ್ಕರಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ತಂದೆ ತಾಯಿ ಫೋಟೊಗೆ ಪೂಜೆ ಸಲ್ಲಿಸಿ ಕಾರ್ಯಾರಂಭಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರ್ಕಾರ ಪಠ್ಯಕ್ರಮಗಳಲ್ಲಿ ಕೆಲವು ಆಕ್ಷೇಪಾರ್ಹ ವಿಷಯಗಳನ್ನು ಸೇರ್ಪಡೆ ಮಾಡಿದೆ. ಅವುಗಳನ್ನು ಪರಿಷ್ಕರಿಸಲು ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಆಸಕ್ತಿ ವಹಿಸಿದ್ದಾರೆ. ಈಗಾಗಲೇ ಶಿಕ್ಷಣ ತಜ್ಞರುಗಳ ಜೊತೆ ಹಲವು ಸುತ್ತಿನ ಚರ್ಚೆಗಳಾಗಿವೆ. ಸಾಹಿತಿಗಳು, ಲೇಖಕರು ಕೂಡ ಸಲಹೆಯನ್ನು ಕೊಟ್ಟಿದ್ದಾರೆ ಎಂದರು.

ಮಾಧ್ಯಮಗಳಲ್ಲಿ ಈ ವರ್ಷ ಪಠ್ಯಪುಸ್ತಕ ಬದಲಾವಣೆ ಇಲ್ಲ. ಮುಂದಿನ ವರ್ಷ ಮಾಡಲಾಗುತ್ತದೆ ಎಂಬ ಮಾಹಿತಿ ಭಿತ್ತರವಾಗುತ್ತಿವೆ. ಆದರೆ ಮಕ್ಕಳು ತಪ್ಪು ಓದಬಾರದು. ತಪ್ಪು ಪಠ್ಯ ಸರಿ ಪಡಿಸಲು ಮುಂದಿನ ವರ್ಷದವರೆಗೂ ಕಾಯಬೇಕಿಲ್ಲ. ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಪಠ್ಯದಲ್ಲಿ ಯಾವ ಅಂಶಗಳನ್ನು ಮುಂದುವರಿಸಬೇಕು. ಆಕ್ಷೇಪಾರ್ಹ ವಿಷಯಗಳನ್ನು ಪರಿಷ್ಕರಿಸುವ ಬಗ್ಗೆ ತಜ್ಞರು ಶಿಫಾರಸ್ಸು ಮಾಡಲಿದ್ದಾರೆ. ಅದನ್ನು ಆಧರಿಸಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ತಿದ್ದೋಲೆ ಕಳುಹಿಸಲಾಗಿದೆ. ಈಗಾಗಲೇ ಪಠ್ಯ ಪುಸ್ತಕಗಳು ಶಾಲೆಗಳಿಗೆ ತಲುಪಿರುವುದರಿಂದ ಪರಿಷ್ಕರಣೆಯ ಮೂಲಕ ಮರುಮುದ್ರಣೆ ಸಾಧ್ಯವಿಲ್ಲ. ಹಾಗಾಗಿ ತಿದ್ದೋಲೆಯ ಮಾರ್ಗವನ್ನು ಅನುಸರಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಠ್ಯ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಅವರು ಸಹ ಆಸಕ್ತಿ ಹೊಂದಿದ್ದಾರೆ. ಪೂರಕ ಪಠ್ಯ ಪುಸ್ತಕವನ್ನು ಒದಗಿಸಲಾಗುತ್ತದೆ. ಯಾವ ಪಾಠ ಮಾಡಬೇಕು ಯಾವುದು ಬೇಡ ಎಂಬುದನ್ನು ಶಿಕ್ಷಕರಿಗೆ ಸೂಚಿಸಲಾಗುತ್ತದೆ. ಈಗಾಗಲೇ ಶಾಲೆಗಳಿಗೆ ಪಠ್ಯ ಪುಸ್ತಕ ತಲುಪದಿರುವುದರಿಂದ ಪೂರಕ ಪಠ್ಯ ಪುಸ್ತಕ ಒದಗಿಸಲು ಅವಕಾಶ ಇದೆ ಎಂದರು.

ಏನೇ ಬದಲಾವಣೆ ಮಾಡಿದರೂ ಮಕ್ಕಳ ಒಳಿತನ್ನೇ ಗಮನದಲ್ಲಿಟ್ಟುಕೊಂಡು ಮಾಡುತ್ತೇವೆ. ಈ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದು ಸೂಕ್ಷ್ಮ ವಿಷಯ. ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಬೇಕಿದೆ. ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದೆವು.

ಅದರಂತೆ ತಜ್ಞರು ಹಿರಿಯರ ಸಲಹೆ, ಅಭಿಪ್ರಾಯ ಪಡೆದಿದ್ದೇವೆ. ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಹ ಸಲಹೆ ಕೊಟ್ಟಿದ್ದಾರೆ. ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುವುದಿದ್ದರೆ ಮಾತ್ರ ನಾವು ಅದನ್ನು ಸರಿಪಡಿಸಲು ಮುಂದುವರೆಯುತ್ತೇವೆ. ಅದನ್ನು ಬಿಟ್ಟು ಯಾವುದೇ ತೀರ್ಮಾನ ಮಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಸದ್ಯ ಸರ್ಕಾರಿ ಶಾಲೆಗಳಲ್ಲಿ ಸೇತುಬಂಧ ತರಗತಿಗಳು ನಡೆಯುತ್ತಿದೆ. ಇನ್ನೂ ಪಠ್ಯಕ್ರಮಗಳು ಆರಂಭಗೊಂಡಿಲ್ಲ. ಸರ್ಕಾರ ಸೂಕ್ತ ಕಾಲಕ್ಕೆ ಅದಕ್ಕೆ ಮಾರ್ಗಸೂಚಿಗಳನ್ನು ರವಾನಿಸಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲೇ ಈ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಆದರೆ ನೇಮಕಾತಿ ಪ್ರಕ್ರಿಯೆಗೆ ಕಾನೂನಾತ್ಮಕ ತೊಡಕುಗಳಿವೆ. ಅವುಗಳ ಪರಿಹಾರಕ್ಕೆ ಅಡ್ವಕೇಟ್ ಜನರಲ್ ಜೊತೆ ಚರ್ಚೆ ನಡೆಸಲಾಗುತ್ತಿದೆ. ಅತಿಥಿ ಶಿಕ್ಷಕರ ನೇಮಕಾತಿಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಖಾಯಂ ಶಿಕ್ಷಕರ ನೇಮಕಾತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

13 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

15 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

15 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

16 hours ago