BREAKING NEWS

ಗೊಂದಲಗಳ್ನು ಸರಿಪಡಿಸಿ ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ : ಬಿ.ವೈ.ವಿಜಯೇಂದ್ರ !

ಮೈಸೂರು : ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳಿದ್ದರೂ ಸಹ ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾವೆಲ್ಲಾ ಒಂದಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ರಾಷ್ಟ್ರೀಯ ಪಕ್ಷ ವಾದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ. ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತಿದ್ದೇವೆ. ಈಶ್ವರಪ್ಪ ಅವರ ಸಮಸ್ಯೆ ಕೂಡ ಬಗೆಹರೆಯುತ್ತದೆ ಎಂಬ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ನಾಯಕರ ಸಮ್ಮುಖದಲ್ಲೇ ತೀರ್ಮಾನವಾಗಿದೆ : ಟಿಕೆಟ್‌ ವಿಚಾರದಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾತು ಕೇಳಿಕೊಂಡು ತೀರ್ಮಾನಗಳನ್ನು ಕೈಗೊಳ್ಳುವ ನಾಯಕತ್ವ ನಮ್ಮದಲ್ಲ. ಕೇಂದ್ರದಲ್ಲಿ ಮೋದಿ, ಅಮಿತ್‌ ಶಾ, ನಡ್ಡ ಅವರಂತಹ ಬಲಿಷ್ಠ ನಾಯಕರಿದ್ದಾರೆ. ಇವರೆಲ್ಲರೂ ರಾಜ್ಯ ನಾಯಕರ ಸಮ್ಮುಖದಲ್ಲೇ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೇವಲ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾಡಿರುವ ತೀರ್ಮಾನ ಅಲ್ಲ ಎಂದು ತಿಳಿಸಿದರು.

ದಾಖಲೆ ಅಂತರದಲ್ಲಿ ಗೆಲ್ಲುತೇವೆ : ದಾಖಲೆ ಅಂತರದಿಂದ ಮೈಸೂರು-ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ. ಆ ವಿಶ್ವಾಸದಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಮತ್ತು ಕ್ಷೇತ್ರದ ಮತದಾರರೂ ಇದ್ದಾರೆ. ನರೇಂದ್ರ ಮೋದಿ ಅವರ ಮೇಲಿರುವ ಪ್ರೀತಿಯ ಪರಿಣಾಮ ಮೈತ್ರಿ ಪಕ್ಷಗಳು ರಾಜ್ಯದ ಎಲ್ಲಾ ಕ್ಷೇತ್ರದಲ್ಲೂ ಗೆಲುತ್ತದೆ.

ಸಂಕಲ್ಪ ಈಡೇರಿಸಲು ಚಾಮುಂಡೇಶ್ವರಿಗೆ ಪ್ರರ್ಥನೆ : ರಾಜ್ಯದಲ್ಲಿ ಭೀಕರ ಬರಗಾಲ ಇದೆ. ೪೦೦ ಸ್ಥಾನಗಳನ್ನು ಪಡೆಯುವ ಮೂಲಕ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸುಭದ್ರ ಸರ್ಕಾರ ನಿರ್ಮಾಣ ಆಗಬೇಕು . ಪ್ರಧಾನಿ ತಮ್ಮ ಗುರಿ ತಲುಪಬೇಕು. ರಾಜ್ಯದ ಮೈತ್ರಿಕೂಟ ೨೮ ಕ್ಷೇತ್ರದಲ್ಲಿ ಗೆದ್ದು ಪ್ರಧನಿ ಕೈ ಬಲ ಪಡಿಸಬೇಕು. ಈ ಎಲ್ಲಾ ಸಂಕಲ್ಪ ಈಡೇರಿಸಲು ತಾಯಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಜನಪ್ರೀಯತೆ ಕಳೆದುಕೊಂಡ ಸರ್ಕಾರ : ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಮುಖಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಮಂತ್ರಿಮಂಡಳ ಸಂಪೂರ್ಣವಾಗಿ ಗಾಬರಿಯಾಗಿದ್ದಾರೆ. ಯಾವುದೋ ಒಂದು ಭ್ರಮೆಯಲ್ಲಿದ್ದ ಮುಖ್ಯಮಂತ್ರಿಗಳು ಹಾಗೂ ಮಂತ್ರಿಮಂಡಳಕ್ಕೆ ಇಂದು ಜ್ಞಾನೋದಯವಾಗಿದೆ. ರಾಜ್ಯ ಸರ್ಕಾರ ಶೂನ್ಯ ಸಾಧನೆ ಮಾಡಿದೆ. ಯಾವುದೇ ಅಭಿವೃದ್ದಿ ಮಾಡ ಈ ಸರ್ಕಾರ ರಾಜ್ಯದ ಬಡವರು, ರೈತರು ಹಾಗೂ ಹಿಂದುಳಿದವರಿಗೆ ಶಾಪವಾಗಿ ಪರಿಣಮಿಸಿದೆ.

ಒಂದು ರೀತಿ ರಾಜ್ಯ ಸರ್ಕಾರವೇ ತನ್ನ ವಿಶವಾಸವನ್ನು ಕಳೆದುಕೊಂಡಿದೆ. ದೇಶದಲ್ಲೇ ಕಡಿಮೆ ಅವಧಿಯಲ್ಲಿ ಜನಪ್ರೀಯತೆ ಕಳೆದುಕೊಂಡ ಸರ್ಕಾರ ಇದ್ದರೆ ಅದು ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ. ಅದರ ಪರಿಣಾಮ ಮುಂದಿನ ದಿನಗಳಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago