ಕಲಬುರಗಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ಕೊಡುವುದು ತುಂಬಾ ಬೇಗ ಎನಿಸುತ್ತದೆ. ಆದರೆ ತೆಲಂಗಾಣ ಮತ್ತು ಛತ್ತೀಸ್ಗಢದಲ್ಲಿ ನಾವು ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಬಿಆರ್ಎಸ್ ಸರ್ಕಾರದ ವಿರುದ್ಧ ಜನರ ಆಕ್ರೋಶ ಇತ್ತು. ಸ್ವತಃ ನಾನೆ ಇದ್ದು ನೋಡಿದ್ದೇನೆ. ಕಾಲೇಶ್ವರಂ ನೀರಾವರಿ ಯೋಜನೆ ಒಂದರಲ್ಲಿಯೇ ಒಂದುವರೆ ಲಕ್ಷ ಕೋಟಿ ರೂ.ಹಗರಣ ಆಗಿದೆ ಅಂತ ಹೇಳ್ತಿದಾರೆ.
ಹೀಗೆ 10 ಸ್ಕ್ಯಾಮ್ ನಲ್ಲಿ ಹತ್ತು ಲಕ್ಷ ಕೋಟಿ ಹಣ ಹಗರಣ ಮಾಡಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಅಲ್ಲಿ ಯಾವುದೇ ರೀತಿಯ ಉದ್ಯೋಗ ಸೃಷ್ಟಿ ಆಗಿರಲಿಲ್ಲ, ಯುವಕರು ಆಕ್ರೋಶಗೊಂಡಿದ್ದರು. ಈ ಎಲ್ಲ ಕಾರಣಕ್ಕಾಗಿ ಜನ ನಮಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಧ್ಯಪ್ರದೇಶದಲ್ಲಿ ಸ್ವಲ್ಪ ಹಿನ್ನಡೆ ಅನಿಸುತ್ತಿದೆ ಆದರೂ ಫೈನಲ್ ವರೆಗೂ ಅದನ್ನೂ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇದೆ ಎಂದಿದ್ದಾರೆ. ಯಾವ ಆಪರೇಷನ್ ಭಯ ಇಲ್ಲ. ಆದ್ರೆ ನಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ. ಬಿಜೆಪಿ ಅವರು ತೋಳ್ಬಲ, ಹಣ ಬಲ, ಸಿಬಿಐ, ಇಡಿ ಬಳಕೆ ಮಾಡ್ತಾರೆ, ಹೀಗಾಗಿ ನಮ್ಮ ಶಾಸಕರನ್ನ ನಾವು ಸೇಫ್ ಆಗಿ ಇಟ್ಟುಕೊಳ್ಳಬೇಕಿದೆ ಎಂದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…