ಕಲಬುರಗಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ಕೊಡುವುದು ತುಂಬಾ ಬೇಗ ಎನಿಸುತ್ತದೆ. ಆದರೆ ತೆಲಂಗಾಣ ಮತ್ತು ಛತ್ತೀಸ್ಗಢದಲ್ಲಿ ನಾವು ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಬಿಆರ್ಎಸ್ ಸರ್ಕಾರದ ವಿರುದ್ಧ ಜನರ ಆಕ್ರೋಶ ಇತ್ತು. ಸ್ವತಃ ನಾನೆ ಇದ್ದು ನೋಡಿದ್ದೇನೆ. ಕಾಲೇಶ್ವರಂ ನೀರಾವರಿ ಯೋಜನೆ ಒಂದರಲ್ಲಿಯೇ ಒಂದುವರೆ ಲಕ್ಷ ಕೋಟಿ ರೂ.ಹಗರಣ ಆಗಿದೆ ಅಂತ ಹೇಳ್ತಿದಾರೆ.
ಹೀಗೆ 10 ಸ್ಕ್ಯಾಮ್ ನಲ್ಲಿ ಹತ್ತು ಲಕ್ಷ ಕೋಟಿ ಹಣ ಹಗರಣ ಮಾಡಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಅಲ್ಲಿ ಯಾವುದೇ ರೀತಿಯ ಉದ್ಯೋಗ ಸೃಷ್ಟಿ ಆಗಿರಲಿಲ್ಲ, ಯುವಕರು ಆಕ್ರೋಶಗೊಂಡಿದ್ದರು. ಈ ಎಲ್ಲ ಕಾರಣಕ್ಕಾಗಿ ಜನ ನಮಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಧ್ಯಪ್ರದೇಶದಲ್ಲಿ ಸ್ವಲ್ಪ ಹಿನ್ನಡೆ ಅನಿಸುತ್ತಿದೆ ಆದರೂ ಫೈನಲ್ ವರೆಗೂ ಅದನ್ನೂ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇದೆ ಎಂದಿದ್ದಾರೆ. ಯಾವ ಆಪರೇಷನ್ ಭಯ ಇಲ್ಲ. ಆದ್ರೆ ನಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ. ಬಿಜೆಪಿ ಅವರು ತೋಳ್ಬಲ, ಹಣ ಬಲ, ಸಿಬಿಐ, ಇಡಿ ಬಳಕೆ ಮಾಡ್ತಾರೆ, ಹೀಗಾಗಿ ನಮ್ಮ ಶಾಸಕರನ್ನ ನಾವು ಸೇಫ್ ಆಗಿ ಇಟ್ಟುಕೊಳ್ಳಬೇಕಿದೆ ಎಂದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…