Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

ವಕೀಲರೊಂದಿಗೆ ಚರ್ಚಿಸಿ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ : ಪ್ರಜ್ವಲ್‌ ರೇವಣ್ಣ

ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್‌ ರೇವಣ್ಣ, ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ವಕೀಲರ ಭೇಟಿಯಾಗಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಹೊಳೆನರಸೀಪುರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶನಿವಾರ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.

ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್‌ಗೆ ಹಾಜರಾಗುತ್ತಿದ್ದು, ಯಾವ ವಿಚಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಹಾಗೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದು ಹೇಳಿದರು.

ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡುತ್ತೇವೆ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!