ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ವಕೀಲರ ಭೇಟಿಯಾಗಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಹೊಳೆನರಸೀಪುರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶನಿವಾರ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.
ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್ಗೆ ಹಾಜರಾಗುತ್ತಿದ್ದು, ಯಾವ ವಿಚಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಹಾಗೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದು ಹೇಳಿದರು.
ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡುತ್ತೇವೆ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…