BREAKING NEWS

ವಕೀಲರೊಂದಿಗೆ ಚರ್ಚಿಸಿ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ : ಪ್ರಜ್ವಲ್‌ ರೇವಣ್ಣ

ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್‌ ರೇವಣ್ಣ, ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ವಕೀಲರ ಭೇಟಿಯಾಗಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಹೊಳೆನರಸೀಪುರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶನಿವಾರ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.

ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್‌ಗೆ ಹಾಜರಾಗುತ್ತಿದ್ದು, ಯಾವ ವಿಚಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಹಾಗೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದು ಹೇಳಿದರು.

ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡುತ್ತೇವೆ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದರು.

lokesh

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

10 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

11 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

11 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

12 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

13 hours ago