ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ವಕೀಲರ ಭೇಟಿಯಾಗಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಹೊಳೆನರಸೀಪುರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶನಿವಾರ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದರು.
ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್ಗೆ ಹಾಜರಾಗುತ್ತಿದ್ದು, ಯಾವ ವಿಚಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಹಾಗೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದು ಹೇಳಿದರು.
ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಎಲ್ಲಿ ಆದೇಶ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡುತ್ತೇವೆ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…