BREAKING NEWS

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವ ಗ್ಯಾರಂಟಿ ಕೊಡುತ್ತೇವೆ : ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವಂತಹ ಗ್ಯಾರಂಟಿಗಳನ್ನು ನಾವು ಕೊಡುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜು ಕಟ್ಟಡ ಪರಿಶೀಲನೆ ಸಂಬಂಧ ಆಗಮಿಸಿದ್ದ ಯತ್ನಾಳ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸೀಟು ಬಿಜೆಪಿ ಗೆಲ್ಲಲಿದೆ ಎಂದರು.

ಇನ್ನೂ ಎಂದೂ ಸಹ ನಾನು ಮಂತ್ರಿಗಿರಿಗಾಗಿ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ಮಾಡಿದನವಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನನ್ನ ಅರ್ಹತೆ ಹಿರಿತನ ಅಧರಿಸಿ ಪಕ್ಷವೇ ಪರಿಗಣಿಸಬೇಕು. ನಾನು ಎಂದೂ ಯಾವುದಕ್ಕೂ ಒತ್ತಾಯ ಮಾಡುವುದಿಲ್ಲ. ನಾನು ಎಂದೂ ಲಾಬಿ ಮಾಡಿದವನಲ್ಲ. ಕೇಂದ್ರ ಮಂತ್ರಿ ಆದಾಗಲೂ ನಾನು ಲಾಬಿ ಮಾಡಿಲ್ಲ. ವಿಧಾನಸಭೆ ಟಿಕೆಟ್ ಸಲುವಾಗಿಯೂ ನಾನು ಲಾಬಿ ಮಾಡಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಲೊಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯಾಧ್ಯಕ್ಷರ ಅಯ್ಕೆ ವಿಳಂಬ ರಾಜ್ಯದ ಸಮಸ್ಯೆಗಳು ಚುನಾವಣೆ ಮೇಲೆ ಪರಿಣಾಮ ಬರಲ್ಲ. ರಾಜ್ಯದ ಸಮಸ್ಯೆಗಳು ರಾಜ್ಯಕ್ಕೆ ಮಾತ್ರ ಸೀಮಿತವಾಗಲಿವೆ. ಕೇಂದ್ರದ ವಿಚಾರದಲ್ಲಿ ಜನ ಒನ್ ನೇಷನ್ ಒನ್ ಲೀಡರ್ ನರೇಂದ್ರ ಮೋದಿ ಅಂತಾರೆ. ಲೋಕಸಭಾ ಚುನಾವಣೆಗೂ ಮುನ್ನ ದೇಶಕ್ಕೆ ದೊಡ್ಡ ಗ್ಯಾರಂಟಿ ಕೊಡಲಿದ್ದೇವೆ. ಆ ಗ್ಯಾರಂಟಿ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ತಡೆಯೋದಿಲ್ಲ. ಚುನಾವಣೆ ಬರಲಿ ನಮ್ಮ ಗ್ಯಾರಂಟಿ ಗಳು ಏನು ಅಂತ ಗೊತ್ತಾಗಲಿದೆ. ದೇಶದ ಹಿತ ಕಾಯುವ ಗ್ಯಾರಂಟಿಗಳನ್ನು ಕೊಡಲಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎಂಬುದು ಕೆಲವರ ಅಭಿಪ್ರಾಯ ಅಷ್ಟೇ. ಬಿಜೆಪಿ ಪಕ್ಷಕ್ಕೆ ಯಾರೂ ಸಹ ಅನಿವಾರ್ಯ ಅಲ್ಲ. ಯಡಿಯೂರಪ್ಪ ಅನಿವಾರ್ಯ ಎಂಬುದು ಕೆಲವು ಮಂದಿ ಕೆಲ ಚಾನೆಲ್‍ಗಳ ಅಭಿಪ್ರಾಯ ಅಷ್ಟೇ. ಯಡಿಯೂರಪ್ಪ ಸಹ ಒಬ್ಬ ಹಿರಿಯ ನಾಯಕರು. ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ ಅವರ ಬಗ್ಗೆ ಚರ್ಚೆ ಬೇಡ ಎಂದರು.

lokesh

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

21 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

59 mins ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

2 hours ago