BREAKING NEWS

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವ ಗ್ಯಾರಂಟಿ ಕೊಡುತ್ತೇವೆ : ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವಂತಹ ಗ್ಯಾರಂಟಿಗಳನ್ನು ನಾವು ಕೊಡುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜು ಕಟ್ಟಡ ಪರಿಶೀಲನೆ ಸಂಬಂಧ ಆಗಮಿಸಿದ್ದ ಯತ್ನಾಳ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸೀಟು ಬಿಜೆಪಿ ಗೆಲ್ಲಲಿದೆ ಎಂದರು.

ಇನ್ನೂ ಎಂದೂ ಸಹ ನಾನು ಮಂತ್ರಿಗಿರಿಗಾಗಿ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ಮಾಡಿದನವಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನನ್ನ ಅರ್ಹತೆ ಹಿರಿತನ ಅಧರಿಸಿ ಪಕ್ಷವೇ ಪರಿಗಣಿಸಬೇಕು. ನಾನು ಎಂದೂ ಯಾವುದಕ್ಕೂ ಒತ್ತಾಯ ಮಾಡುವುದಿಲ್ಲ. ನಾನು ಎಂದೂ ಲಾಬಿ ಮಾಡಿದವನಲ್ಲ. ಕೇಂದ್ರ ಮಂತ್ರಿ ಆದಾಗಲೂ ನಾನು ಲಾಬಿ ಮಾಡಿಲ್ಲ. ವಿಧಾನಸಭೆ ಟಿಕೆಟ್ ಸಲುವಾಗಿಯೂ ನಾನು ಲಾಬಿ ಮಾಡಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಲೊಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯಾಧ್ಯಕ್ಷರ ಅಯ್ಕೆ ವಿಳಂಬ ರಾಜ್ಯದ ಸಮಸ್ಯೆಗಳು ಚುನಾವಣೆ ಮೇಲೆ ಪರಿಣಾಮ ಬರಲ್ಲ. ರಾಜ್ಯದ ಸಮಸ್ಯೆಗಳು ರಾಜ್ಯಕ್ಕೆ ಮಾತ್ರ ಸೀಮಿತವಾಗಲಿವೆ. ಕೇಂದ್ರದ ವಿಚಾರದಲ್ಲಿ ಜನ ಒನ್ ನೇಷನ್ ಒನ್ ಲೀಡರ್ ನರೇಂದ್ರ ಮೋದಿ ಅಂತಾರೆ. ಲೋಕಸಭಾ ಚುನಾವಣೆಗೂ ಮುನ್ನ ದೇಶಕ್ಕೆ ದೊಡ್ಡ ಗ್ಯಾರಂಟಿ ಕೊಡಲಿದ್ದೇವೆ. ಆ ಗ್ಯಾರಂಟಿ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ತಡೆಯೋದಿಲ್ಲ. ಚುನಾವಣೆ ಬರಲಿ ನಮ್ಮ ಗ್ಯಾರಂಟಿ ಗಳು ಏನು ಅಂತ ಗೊತ್ತಾಗಲಿದೆ. ದೇಶದ ಹಿತ ಕಾಯುವ ಗ್ಯಾರಂಟಿಗಳನ್ನು ಕೊಡಲಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎಂಬುದು ಕೆಲವರ ಅಭಿಪ್ರಾಯ ಅಷ್ಟೇ. ಬಿಜೆಪಿ ಪಕ್ಷಕ್ಕೆ ಯಾರೂ ಸಹ ಅನಿವಾರ್ಯ ಅಲ್ಲ. ಯಡಿಯೂರಪ್ಪ ಅನಿವಾರ್ಯ ಎಂಬುದು ಕೆಲವು ಮಂದಿ ಕೆಲ ಚಾನೆಲ್‍ಗಳ ಅಭಿಪ್ರಾಯ ಅಷ್ಟೇ. ಯಡಿಯೂರಪ್ಪ ಸಹ ಒಬ್ಬ ಹಿರಿಯ ನಾಯಕರು. ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ ಅವರ ಬಗ್ಗೆ ಚರ್ಚೆ ಬೇಡ ಎಂದರು.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

4 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

18 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

23 hours ago