BREAKING NEWS

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವ ಗ್ಯಾರಂಟಿ ಕೊಡುತ್ತೇವೆ : ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವಂತಹ ಗ್ಯಾರಂಟಿಗಳನ್ನು ನಾವು ಕೊಡುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜು ಕಟ್ಟಡ ಪರಿಶೀಲನೆ ಸಂಬಂಧ ಆಗಮಿಸಿದ್ದ ಯತ್ನಾಳ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸೀಟು ಬಿಜೆಪಿ ಗೆಲ್ಲಲಿದೆ ಎಂದರು.

ಇನ್ನೂ ಎಂದೂ ಸಹ ನಾನು ಮಂತ್ರಿಗಿರಿಗಾಗಿ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ಮಾಡಿದನವಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನನ್ನ ಅರ್ಹತೆ ಹಿರಿತನ ಅಧರಿಸಿ ಪಕ್ಷವೇ ಪರಿಗಣಿಸಬೇಕು. ನಾನು ಎಂದೂ ಯಾವುದಕ್ಕೂ ಒತ್ತಾಯ ಮಾಡುವುದಿಲ್ಲ. ನಾನು ಎಂದೂ ಲಾಬಿ ಮಾಡಿದವನಲ್ಲ. ಕೇಂದ್ರ ಮಂತ್ರಿ ಆದಾಗಲೂ ನಾನು ಲಾಬಿ ಮಾಡಿಲ್ಲ. ವಿಧಾನಸಭೆ ಟಿಕೆಟ್ ಸಲುವಾಗಿಯೂ ನಾನು ಲಾಬಿ ಮಾಡಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಲೊಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯಾಧ್ಯಕ್ಷರ ಅಯ್ಕೆ ವಿಳಂಬ ರಾಜ್ಯದ ಸಮಸ್ಯೆಗಳು ಚುನಾವಣೆ ಮೇಲೆ ಪರಿಣಾಮ ಬರಲ್ಲ. ರಾಜ್ಯದ ಸಮಸ್ಯೆಗಳು ರಾಜ್ಯಕ್ಕೆ ಮಾತ್ರ ಸೀಮಿತವಾಗಲಿವೆ. ಕೇಂದ್ರದ ವಿಚಾರದಲ್ಲಿ ಜನ ಒನ್ ನೇಷನ್ ಒನ್ ಲೀಡರ್ ನರೇಂದ್ರ ಮೋದಿ ಅಂತಾರೆ. ಲೋಕಸಭಾ ಚುನಾವಣೆಗೂ ಮುನ್ನ ದೇಶಕ್ಕೆ ದೊಡ್ಡ ಗ್ಯಾರಂಟಿ ಕೊಡಲಿದ್ದೇವೆ. ಆ ಗ್ಯಾರಂಟಿ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ತಡೆಯೋದಿಲ್ಲ. ಚುನಾವಣೆ ಬರಲಿ ನಮ್ಮ ಗ್ಯಾರಂಟಿ ಗಳು ಏನು ಅಂತ ಗೊತ್ತಾಗಲಿದೆ. ದೇಶದ ಹಿತ ಕಾಯುವ ಗ್ಯಾರಂಟಿಗಳನ್ನು ಕೊಡಲಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎಂಬುದು ಕೆಲವರ ಅಭಿಪ್ರಾಯ ಅಷ್ಟೇ. ಬಿಜೆಪಿ ಪಕ್ಷಕ್ಕೆ ಯಾರೂ ಸಹ ಅನಿವಾರ್ಯ ಅಲ್ಲ. ಯಡಿಯೂರಪ್ಪ ಅನಿವಾರ್ಯ ಎಂಬುದು ಕೆಲವು ಮಂದಿ ಕೆಲ ಚಾನೆಲ್‍ಗಳ ಅಭಿಪ್ರಾಯ ಅಷ್ಟೇ. ಯಡಿಯೂರಪ್ಪ ಸಹ ಒಬ್ಬ ಹಿರಿಯ ನಾಯಕರು. ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ ಅವರ ಬಗ್ಗೆ ಚರ್ಚೆ ಬೇಡ ಎಂದರು.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

3 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

3 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

4 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

13 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago