ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ.
ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ ಮಾತನಾಡಲಿದ್ದಾರೆ. ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಅಲಂಕರಿಸುತ್ತಿದ್ದಾರೆ.
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಲಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.
ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಚಿತ್ರೀಕರಣ ಮಾಡಲಾಗುತ್ತಿದ್ದು, ಬರುವ ಭಾನುವಾರ ಮುಹೂರ್ತ ಫಿಕ್ಸ್ ಆಗಿದೆ. ಹಾಗಾಗಿ ಮುಂದಿನ ವಾರಗಳಲ್ಲಿ ಅವರ ಕಂತು ಪ್ರಸಾರವಾಗಲಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…