BREAKING NEWS

ವೀಕೆಂಡ್ ಶೋ : ಡಿಸಿಎಂ ಡಿಕೆಶಿ ಬರೋದು ಖಚಿತ

ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ.
ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ ಮಾತನಾಡಲಿದ್ದಾರೆ. ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಅಲಂಕರಿಸುತ್ತಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಲಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಚಿತ್ರೀಕರಣ ಮಾಡಲಾಗುತ್ತಿದ್ದು, ಬರುವ ಭಾನುವಾರ ಮುಹೂರ್ತ ಫಿಕ್ಸ್ ಆಗಿದೆ. ಹಾಗಾಗಿ ಮುಂದಿನ ವಾರಗಳಲ್ಲಿ ಅವರ ಕಂತು ಪ್ರಸಾರವಾಗಲಿದೆ.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago