BREAKING NEWS

ವೀಕೆಂಡ್ ಶೋ : ಡಿಸಿಎಂ ಡಿಕೆಶಿ ಬರೋದು ಖಚಿತ

ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ.
ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ ಮಾತನಾಡಲಿದ್ದಾರೆ. ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಅಲಂಕರಿಸುತ್ತಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಲಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಚಿತ್ರೀಕರಣ ಮಾಡಲಾಗುತ್ತಿದ್ದು, ಬರುವ ಭಾನುವಾರ ಮುಹೂರ್ತ ಫಿಕ್ಸ್ ಆಗಿದೆ. ಹಾಗಾಗಿ ಮುಂದಿನ ವಾರಗಳಲ್ಲಿ ಅವರ ಕಂತು ಪ್ರಸಾರವಾಗಲಿದೆ.

lokesh

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago