BREAKING NEWS

ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಲಕ್ಷ್ಮಣ ಸವದಿ ಹೇಳಿದ್ದೇನು ?

ಬೆಳಗಾವಿ : ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, 224 ವಿಧಾನಸಭಾ ಕ್ಷೇತ್ರಗಳಲ್ಲಿ 137 ಸ್ಥಾನವನ್ನ ಕಾಂಗ್ರೆಸ್​ ಗೆಲ್ಲುವ ಮೂಲಕ ಸಂಪೂರ್ಣ ಬಹುಮತ ಪಡೆದುಕೊಂಡಿದೆ. ಬಿಜೆಪಿಯ ಘಟಾನುಘಟಿ ನಾಯಕರುಗಳು ಈ ಬಾರಿ ಸೋತಿದ್ದಾರೆ. ಅದರಂತೆ ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿಯಲ್ಲಿ ಇದೀಗ ಕಾಂಗ್ರೆಸ್‌ 11 ಕ್ಷೇತ್ರಗಳಲ್ಲಿ ಗೆದ್ದುಕೊಂಡಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್‌ ಶಾಸಕ ಲಕ್ಷ್ಮಣ್ ಸವದಿ ಇಡೀ ರಾಜ್ಯದಲ್ಲಿ ಜನ ಕಾಂಗ್ರೆಸ್ ಪರ ಆಶೀರ್ವಾದ ಮಾಡಿದ್ದಾರೆ. ಸ್ವಂತ ಬಲದ ಮೇಲೆ ಸರ್ಕಾರ ರಚನೆ ಆಗುತ್ತಿದೆ. ಮುಂದಿನ ಐದು ವರ್ಷ ಒಳ್ಳೆಯ ಕೆಲಸ ಮಾಡುವ ಹಂಬಲದಿಂದ ಅನೇಕ ಶಾಸಕರು ಆಯ್ಕೆಯಾಗಿದ್ದು, ಜನರ ಪ್ರೀತಿ ಗಳಿಸಿ ಅವರ ವಿಶ್ವಾಸ ಉಳಿಸುವ ಕೆಲಸ ಮಾಡ್ತೀವಿ ಎಂದರು.

ಸಿಎಂ ಆಯ್ಕೆ ಹೈಕಮಾಂಡ್ ತೀರ್ಮಾನ ಮಾಡುತ್ತೆ : ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಮಾತನಾಡಿದ ಅವರು ‘ ಎಲ್ಲಾ ಜಿಲ್ಲೆಗಳಲ್ಲೂ ಕಾಂಗ್ರೆಸ್‌ ಶಾಸಕರು ಆರಿಸಿ ಬಂದಿದ್ದಾರೆ. ಸರ್ಕಾರ ರಚನೆಗೆ ಎಲ್ಲರದ್ದೂ ಪಾಲು ಇರುತ್ತೆ, ಬೆಳಗಾವಿಯದ್ದು ಏನು ವಿಶೇಷ ಇರಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಹಿಂದಿನಿಗಿಂತ ಹೆಚ್ಚಿನ ಆಶೀರ್ವಾದ ಮಾಡಿದ್ದಾರೆ. ಇನ್ನು ಕುಡಚಿ, ಕಾಗವಾಡದಲ್ಲಿ ಕಾಂಗ್ರೆಸ್ ಗೆಲುವು ವಿಚಾರ ‘ಚುನಾವಣಾ ಸಂದರ್ಭದಲ್ಲಿ ಜನರಿಗೆ ವಿಶ್ವಾಸ ಬರುವ ಮಾತು ಹೇಳಬೇಕು. ಆ ಮಾತಿನಿಂದ ಜನ ಆಶೀರ್ವಾದ ಮಾಡುವ ಮೂಲಕ ಅವರಿಬ್ಬರನ್ನು ಗೆಲ್ಲಿಸುವ ಕೆಲಸ ಮಾಡಿದ್ದಾರೆ ಎಂದರು. ಯಾರು ಸಿಎಂ ಆಗ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ‘ರಾಷ್ಟ್ರೀಯ ಪಕ್ಷದಲ್ಲಿ ಶಾಸಕಾಂಗ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಅದು ಒಬ್ಬಿಬ್ಬರ ಅಭಿಪ್ರಾಯ ಅಲ್ಲ, 135 ಜನರ ಅಭಿಪ್ರಾಯ ಸಂಗ್ರಹ ಮಾಡ್ತಾರೆ. ವರದಿ ಒಪ್ಪಿಸಿದ ಮೇಲೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಮಂತ್ರಿ ಸ್ಥಾನ ಕುರಿತು ‘ಶಾಸಕರಾದ ಮೇಲೆ ಮಂತ್ರಿ ಆಗಬೇಕು, ಡಿಸಿಎಂ ಆಗಬೇಕು, ಸಿಎಂ ಆಗಬೇಕು ಅಂತಾ ಇರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಪಕ್ಷ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರುತ್ತೆ.

ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯಗೆ ಕೊಟ್ಟ ಮಾತು ವೈರಲ್ ವಿಚಾರ ‘ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಿರಿಯರು, ಮತದಾರ ಆಶೀರ್ವಾದ ಗೆಲುವಿಗೆ ಕಾರಣ. ಚುನಾವಣೆಯಲ್ಲಿ ಭರವಸೆ ಮೂಡಿಸಲು ಆ ಮಾತು ಹೇಳಬೇಕಾಗುತ್ತದೆ. ನಾನೇನು ಬ್ರಹ್ಮನೂ ಅಲ್ಲ, ಬೇರೆಯವರ ರೀತಿ ನಾನು ದೊಡ್ಡ ನಾಯಕನೂ ಅಲ್ಲ. ಪ್ರಚಾರದ ವೇಳೆ ಲಕ್ಷ್ಮಣ್ ಸವದಿಗೆ ಕಬ್ಬು ಹೇರಲು ಕಲಿಸೋಣ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ‘ ಆಧುನಿಕ ಯುಗದಲ್ಲಿ ಕಬ್ಬು ಕಡಿಯುವ ಜನರು ಕಡಿಮೆ ಆಗಿದ್ದು, ಮಷಿನ್ ಬಂದಿದೆ. ನಿನ್ನೆ ಅಭಿನಂದನೆ ಸಮಾರಂಭದಲ್ಲಿ ಕಬ್ಬು ಕಡಿಯುವ ಮಷಿನ್ ತಂದು ಪೂಜೆ ಮಾಡಿಸಿದ್ರು, ಅದರ ಬಗ್ಗೆ ಚರ್ಚೆ ಮಾಡೋದು ಅನವಶ್ಯಕ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ವಿಚಾರ ‘ನಿರಂತರ ಪಕ್ಷ ಸಂಘಟನೆ ನನ್ನ ಹವ್ಯಾಸ, ನಾನು ರೂಢಿಸಿಕೊಂಡ ಸ್ವಭಾ, 11 ಕ್ಷೇತ್ರ ಇದ್ದಿದ್ದನ್ನು ಮುಂದಿನ ಬಾರಿ 18 ಕ್ಷೇತ್ರ ಒಯ್ಯಲು ಏನು ಮಾಡಬೇಕು ಮಾಡ್ತೀವಿ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಸೋಲು ‘ ಬಿಜೆಪಿಯವರು ಸಂಘಟಿತರಾಗಿ ಕೆಲಸ ಮಾಡಿದ್ದು ಒಂದಿರಬಹುದು. ಅದರ ಜೊತೆ ಬಹಳ ದುಡ್ಡಿನ ಪ್ರಭಾವ ಅಲ್ಲಿ ಬೀರಿತು. ಅಲ್ಲಿ ದುಡ್ಡಿನ ಹೊಳೆ ಹರಿಸಿದ್ದರಿಂದ ಸೋಲಾಗಿದೆ, ನಮಗೆ ಖೇದ ಆಗಿದೆ. ಹಿರಿಯ ರಾಜಕಾರಣಿ ಆರಿಸಿ ಬರಬೇಕು ಎಂಬ ಆಸೆ ಇತ್ತು, ನಮಗೂ ನೋವು ಇದೆ ಎಂದರು.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

5 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

5 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

8 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

8 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

8 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

8 hours ago