BREAKING NEWS

ಮೋದಿ ಏನು ಛೂ ಮಂತರ್ ಬಾಬಾನಾ ? : ನಡ್ಡಾಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಕಿಚ್ಚ ಸುದೀಪ್‌ ಅವರು ಬೊಮ್ಮಾಯಿ ಅವರಿಗೆ ಸಾಥ್ ನೀಡಿದ್ದರು.

ಇದೇ ವೇಳೆ, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದ ಜೆ.ಪಿ.ನಡ್ಡಾ, ‘ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಮತ ಹಾಕದಿದ್ದರೆ ಮೋದಿಯ ಆರ್ಶೀವಾದದಿಂದ ತಪ್ಪಿಸಿಕೊಳ್ಳುವಿರಿ’ ಎಂದು ಹೇಳಿಕೆ ನೀಡಿದ್ದರು.

ನಡ್ಡಾ ಹೇಳಿಕೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ಮತದಾರರಿಗೆ ಬೆದರಿಕೆ ಹಾಕಿದ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂ ಮಂತರ್ ಬಾಬಾನಾ’ ಎಂದು ಪ್ರಶ್ನಿಸಿದೆ.
ಬಿಜೆಪಿಗರೇ, ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸಿ, ಕನ್ನಡಿಗರನ್ನು ಅವಮಾನಿಸಿದ ಬಿಜೆಪಿ ಅಧ್ಯಕ್ಷ ನಡ್ಡಾ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು. ‘ಮತ ಹಾಕದಿದ್ದರೆ ಮೋದಿಯ ಆಶೀರ್ವಾದವಿಲ್ಲ’ ಎಂದು ಒಕ್ಕೂಟ ವ್ಯವಸ್ಥೆಯ ಗೌರವವನ್ನು ಗಾಳಿಗೆ ತೂರಿ, ಕನ್ನಡಿಗರನ್ನು ಗುಲಾಮರಂತೆ ಕಾಣುವ ಬಿಜೆಪಿಯನ್ನು ರಾಜ್ಯದಿಂದ ಒದ್ದೋಡಿಸಬೇಕು ಎಂದು ಕಾಂಗ್ರೆಸ್ ಕಿಡಿಕಾಡಿದೆ.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago