BREAKING NEWS

ಭಜರಂಗ ದಳ-ಪಿಎಫ್ಐ ನಿಷೇಧದಿಂದ ಏನು ಲಾಭ : ಎಚ್‌ಡಿಕೆ ಪ್ರಶ್ನೆ

ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ ಅಂತಿಮ ದಿನದತ್ತ ಹೋಗುತ್ತಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಆತ್ಮಿಯತೆ ಕಾಣುತ್ತೆ. ಕರ್ನಾಟಕ ಸಂಕಷ್ಟದಲ್ಲಿದ್ದಾಗ ಬಂದಿದ್ದರೆ ವಿಶ್ವಾಸ ಮೂಡುತ್ತಿತ್ತು. ಪಿಎಂ ಈಗ ಜನಕ್ಕೆ ಕೈ ಬಿಸಿ ಹೋಗುತ್ತಾರೆ ಎಂದರು.

ರೋಡ್ ಶೋನಲ್ಲಿ ಜನ ಹಾಗು ಅವರ ಮುಖಂಡರ ಮಧ್ಯೆ ಎಷ್ಟು ಸಹಕಾರ ಗೊತ್ತಿಲ್ಲ. ಮೋದಿಯವರ ಚಾರ್ಮ್ ಈಗ ಕಡಿಮೆಯಾಗಿದೆ. 9 ವರ್ಷವಾಯಿತು ಈಗ ಬದಲಾಗಿದೆ. ಬಿಜೆಪಿಯವರಿಗೆ ಬೊಮ್ಮಾಯಿ ಮುಖವಿಲ್ಲ. ಆದರೆ ಮೋದಿ ಮುಖ ತೋರಿಸುತ್ತಾರೆ. ಹಳೆಯ ಮೈಸೂರು ಭಾಗದಲ್ಲಿ ಈ ಬಾರಿ 10 ಜನ ಆಯ್ಕೆಯಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಅವರು ಅಧಿಕಾರ ಅಮೃತ ಆಚರಣೆ ಮಾಡಲು ಹೊರಟಿದ್ದಾರೆ. ಕಲ್ಯಾಣ ಕರ್ನಾಟಕವನ್ನು ವಿರೋಧ ಪಕ್ಷದವರು ಮರೆತಿದ್ದಾರೆ ಎಂದು ಬಿಜೆಪಿ ಹೇಳಿದೆ. ಕಲ್ಯಾಣ ಕರ್ನಾಟಕಕ್ಕೆ ಏನು ಯೋಜನೆ ಕೊಟ್ಟಿದ್ದಾರೆ. ಕೃಷ್ಣಾ ನ್ಯಾಯಾಧಿಕರಣ ತೀರ್ಪು ಬಂದು 10 ವರ್ಷವಾಯಿತು. ಈ ಅವಧಿಯಲ್ಲಿ ಎರಡೂ ಪಕ್ಷಗಳು ಏನು ಮಾಡಿದ್ಧಾರೆ ಎಂದರು.

lokesh

Recent Posts

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

1 min ago

ಹೆಬ್ಬಾತು ಹಕ್ಕಿಗಳ ಸ್ವರ್ಗ ಹದಿನಾರು ಕೆರೆ!

ಮೈಸೂರು: ಸಾವಿರಾರು ಕಿ.ಮೀ. ದೂರದಿಂದ ವಲಸೆ ಬರುವ ಹಕ್ಕಿಗಳಿಗೆ ಅದರಲ್ಲೂ ವಿಶೇಷವಾಗಿ ಮಂಗೋಲಿಯಾದಿಂದ ಸಾವಿರಾರು ಕಿಲೋಮೀಟರ್ ದೂರ ವಲಸೆ ಬರುವ…

5 mins ago

2 ತಿಂಗಳಿಂದ ಆಡಳಿತಾಧಿಕಾರಿಯಿಲ್ಲದೆ ಜನರ ಅಲೆದಾಟ

ಮಂಜು ಕೋಟೆ ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ ಎಚ್.ಡಿ.ಕೋಟೆ: ಪುರಸಭೆಯಲ್ಲಿ…

8 mins ago

ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಜನಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಅಧಿಕಾರದಲ್ಲೇ ಮುಂದಿನ ಏಪ್ರಿಲ್ ತಿಂಗಳಲ್ಲಿ ಐದು ವರ್ಷಗಳನ್ನು ಪೂರೈಸುತ್ತಿರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ…

14 mins ago

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

11 hours ago