BREAKING NEWS

ಭಜರಂಗ ದಳ-ಪಿಎಫ್ಐ ನಿಷೇಧದಿಂದ ಏನು ಲಾಭ : ಎಚ್‌ಡಿಕೆ ಪ್ರಶ್ನೆ

ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ ಅಂತಿಮ ದಿನದತ್ತ ಹೋಗುತ್ತಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಆತ್ಮಿಯತೆ ಕಾಣುತ್ತೆ. ಕರ್ನಾಟಕ ಸಂಕಷ್ಟದಲ್ಲಿದ್ದಾಗ ಬಂದಿದ್ದರೆ ವಿಶ್ವಾಸ ಮೂಡುತ್ತಿತ್ತು. ಪಿಎಂ ಈಗ ಜನಕ್ಕೆ ಕೈ ಬಿಸಿ ಹೋಗುತ್ತಾರೆ ಎಂದರು.

ರೋಡ್ ಶೋನಲ್ಲಿ ಜನ ಹಾಗು ಅವರ ಮುಖಂಡರ ಮಧ್ಯೆ ಎಷ್ಟು ಸಹಕಾರ ಗೊತ್ತಿಲ್ಲ. ಮೋದಿಯವರ ಚಾರ್ಮ್ ಈಗ ಕಡಿಮೆಯಾಗಿದೆ. 9 ವರ್ಷವಾಯಿತು ಈಗ ಬದಲಾಗಿದೆ. ಬಿಜೆಪಿಯವರಿಗೆ ಬೊಮ್ಮಾಯಿ ಮುಖವಿಲ್ಲ. ಆದರೆ ಮೋದಿ ಮುಖ ತೋರಿಸುತ್ತಾರೆ. ಹಳೆಯ ಮೈಸೂರು ಭಾಗದಲ್ಲಿ ಈ ಬಾರಿ 10 ಜನ ಆಯ್ಕೆಯಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಅವರು ಅಧಿಕಾರ ಅಮೃತ ಆಚರಣೆ ಮಾಡಲು ಹೊರಟಿದ್ದಾರೆ. ಕಲ್ಯಾಣ ಕರ್ನಾಟಕವನ್ನು ವಿರೋಧ ಪಕ್ಷದವರು ಮರೆತಿದ್ದಾರೆ ಎಂದು ಬಿಜೆಪಿ ಹೇಳಿದೆ. ಕಲ್ಯಾಣ ಕರ್ನಾಟಕಕ್ಕೆ ಏನು ಯೋಜನೆ ಕೊಟ್ಟಿದ್ದಾರೆ. ಕೃಷ್ಣಾ ನ್ಯಾಯಾಧಿಕರಣ ತೀರ್ಪು ಬಂದು 10 ವರ್ಷವಾಯಿತು. ಈ ಅವಧಿಯಲ್ಲಿ ಎರಡೂ ಪಕ್ಷಗಳು ಏನು ಮಾಡಿದ್ಧಾರೆ ಎಂದರು.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago