BREAKING NEWS

ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್​ ನೀಡುವ ಗ್ಯಾರಂಟಿಗೆ ಅರ್ಥವೇನಿದೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಈಗಾಗಲೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸದಾ ಸುಳ್ಳಿನ ಭರವಸೆ, ಭ್ರಷ್ಟಾಚಾರದ ಭರವಸೆ ನೀಡುತ್ತದೆ, ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗೆ ಬೆಲೆ ಎಲ್ಲಿದೆ ಎಂದು ಹೇಳಿದ್ದಾರೆ.

ನಾವು ಮುಂದಿನ 5 ವರ್ಷಗಳು ಎಂತಹ ಕೆಲಸವನ್ನು ಮಾಡಲಿದ್ದೇವೆ ಎಂದು ಜನತೆಗೆ ತಿಳಿಸಲಿದ್ದೇವೆ, ಯಾರ ಹತ್ತಿರ ರಾಜ್ಯದ ಅಭಿವೃದ್ಧಿಯ ನೀಲಿನಕ್ಷೆ ಇದೆಯೋ ಜನರು ಅವರನ್ನೇ ಆಯ್ಕೆ ಮಾಡಬೇಕು. ಈಗಾಗಲೇ ಕರ್ನಾಟಕದ ಏರ್​ಪೋರ್ಟ್​, ರೈಲ್ವೆ ನಿಲ್ದಾಣ, ಮೆಟ್ರೋ ಪ್ರಶಂಸೆಗೆ ಪಾತ್ರವಾಗಿವೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕವೂ ಕೂಡ ಪ್ರಮುಖ ಪಾತ್ರವಹಿಸುತ್ತದೆ ಎಂದಿದ್ದಾರೆ.

ಡಬಲ್​ ಇಂಜಿನ್ ಸರ್ಕಾರ ನೇರವಾಗಿ ವಿಕಾಸದ ಕಡೆಗೆ ಹೆಜ್ಜೆ ಇಡುತ್ತದೆ, ಡಬಲ್ ಇಂಜಿನ್ ಸರ್ಕಾರವಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ, ಬಡತನ ನಿರ್ಮೂಲನೆ ತುಂಬಾ ವೇಗವಾಗಿ ಆಗುತ್ತಿದೆ. ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ ಆ ರಾಜ್ಯದಲ್ಲಿ ಕೇಂದ್ರ ಯಾವ ಯೋಜನೆಯನ್ನೂ ಸಫಲವಾಗಲು ಬಿಡುತ್ತಿಲ್ಲ, ಜನರಿಗೆ ಯೋಜನೆ ತಲುಪದೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರಾಜ್ಯ ಸರ್ಕಾರವು 4 ಸಾವಿರ ರೂ, ಕೇಂದ್ರ ಸರ್ಕಾರವು 10 ಸಾವಿರ ರೂ ನೀಡುತ್ತಿದೆ, ಜನರಿಗೆ ಒಟ್ಟು 10 ಸಾವಿರ ರೂ ತಲುಪುತ್ತಿದೆ, ಇದೇ ಡಬಲ್ ಇಂಜಿನ್ ಸರ್ಕಾರದ ಮಹತ್ವ ಎಂದರು.

 

lokesh

Recent Posts

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 mins ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

22 mins ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

32 mins ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

50 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

2 hours ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

2 hours ago