ನವದೆಹಲಿ : ಈಗಾಗಲೇ ಎಕ್ಸ್ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸದಾ ಸುಳ್ಳಿನ ಭರವಸೆ, ಭ್ರಷ್ಟಾಚಾರದ ಭರವಸೆ ನೀಡುತ್ತದೆ, ವಾರಂಟಿಯೇ ಎಕ್ಸ್ಪೈರ್ ಆಗಿರುವ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗೆ ಬೆಲೆ ಎಲ್ಲಿದೆ ಎಂದು ಹೇಳಿದ್ದಾರೆ.
ನಾವು ಮುಂದಿನ 5 ವರ್ಷಗಳು ಎಂತಹ ಕೆಲಸವನ್ನು ಮಾಡಲಿದ್ದೇವೆ ಎಂದು ಜನತೆಗೆ ತಿಳಿಸಲಿದ್ದೇವೆ, ಯಾರ ಹತ್ತಿರ ರಾಜ್ಯದ ಅಭಿವೃದ್ಧಿಯ ನೀಲಿನಕ್ಷೆ ಇದೆಯೋ ಜನರು ಅವರನ್ನೇ ಆಯ್ಕೆ ಮಾಡಬೇಕು. ಈಗಾಗಲೇ ಕರ್ನಾಟಕದ ಏರ್ಪೋರ್ಟ್, ರೈಲ್ವೆ ನಿಲ್ದಾಣ, ಮೆಟ್ರೋ ಪ್ರಶಂಸೆಗೆ ಪಾತ್ರವಾಗಿವೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕವೂ ಕೂಡ ಪ್ರಮುಖ ಪಾತ್ರವಹಿಸುತ್ತದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರ್ಕಾರ ನೇರವಾಗಿ ವಿಕಾಸದ ಕಡೆಗೆ ಹೆಜ್ಜೆ ಇಡುತ್ತದೆ, ಡಬಲ್ ಇಂಜಿನ್ ಸರ್ಕಾರವಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ, ಬಡತನ ನಿರ್ಮೂಲನೆ ತುಂಬಾ ವೇಗವಾಗಿ ಆಗುತ್ತಿದೆ. ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ ಆ ರಾಜ್ಯದಲ್ಲಿ ಕೇಂದ್ರ ಯಾವ ಯೋಜನೆಯನ್ನೂ ಸಫಲವಾಗಲು ಬಿಡುತ್ತಿಲ್ಲ, ಜನರಿಗೆ ಯೋಜನೆ ತಲುಪದೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರಾಜ್ಯ ಸರ್ಕಾರವು 4 ಸಾವಿರ ರೂ, ಕೇಂದ್ರ ಸರ್ಕಾರವು 10 ಸಾವಿರ ರೂ ನೀಡುತ್ತಿದೆ, ಜನರಿಗೆ ಒಟ್ಟು 10 ಸಾವಿರ ರೂ ತಲುಪುತ್ತಿದೆ, ಇದೇ ಡಬಲ್ ಇಂಜಿನ್ ಸರ್ಕಾರದ ಮಹತ್ವ ಎಂದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…