BREAKING NEWS

ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್​ ನೀಡುವ ಗ್ಯಾರಂಟಿಗೆ ಅರ್ಥವೇನಿದೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಈಗಾಗಲೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸದಾ ಸುಳ್ಳಿನ ಭರವಸೆ, ಭ್ರಷ್ಟಾಚಾರದ ಭರವಸೆ ನೀಡುತ್ತದೆ, ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗೆ ಬೆಲೆ ಎಲ್ಲಿದೆ ಎಂದು ಹೇಳಿದ್ದಾರೆ.

ನಾವು ಮುಂದಿನ 5 ವರ್ಷಗಳು ಎಂತಹ ಕೆಲಸವನ್ನು ಮಾಡಲಿದ್ದೇವೆ ಎಂದು ಜನತೆಗೆ ತಿಳಿಸಲಿದ್ದೇವೆ, ಯಾರ ಹತ್ತಿರ ರಾಜ್ಯದ ಅಭಿವೃದ್ಧಿಯ ನೀಲಿನಕ್ಷೆ ಇದೆಯೋ ಜನರು ಅವರನ್ನೇ ಆಯ್ಕೆ ಮಾಡಬೇಕು. ಈಗಾಗಲೇ ಕರ್ನಾಟಕದ ಏರ್​ಪೋರ್ಟ್​, ರೈಲ್ವೆ ನಿಲ್ದಾಣ, ಮೆಟ್ರೋ ಪ್ರಶಂಸೆಗೆ ಪಾತ್ರವಾಗಿವೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕವೂ ಕೂಡ ಪ್ರಮುಖ ಪಾತ್ರವಹಿಸುತ್ತದೆ ಎಂದಿದ್ದಾರೆ.

ಡಬಲ್​ ಇಂಜಿನ್ ಸರ್ಕಾರ ನೇರವಾಗಿ ವಿಕಾಸದ ಕಡೆಗೆ ಹೆಜ್ಜೆ ಇಡುತ್ತದೆ, ಡಬಲ್ ಇಂಜಿನ್ ಸರ್ಕಾರವಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ, ಬಡತನ ನಿರ್ಮೂಲನೆ ತುಂಬಾ ವೇಗವಾಗಿ ಆಗುತ್ತಿದೆ. ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ ಆ ರಾಜ್ಯದಲ್ಲಿ ಕೇಂದ್ರ ಯಾವ ಯೋಜನೆಯನ್ನೂ ಸಫಲವಾಗಲು ಬಿಡುತ್ತಿಲ್ಲ, ಜನರಿಗೆ ಯೋಜನೆ ತಲುಪದೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರಾಜ್ಯ ಸರ್ಕಾರವು 4 ಸಾವಿರ ರೂ, ಕೇಂದ್ರ ಸರ್ಕಾರವು 10 ಸಾವಿರ ರೂ ನೀಡುತ್ತಿದೆ, ಜನರಿಗೆ ಒಟ್ಟು 10 ಸಾವಿರ ರೂ ತಲುಪುತ್ತಿದೆ, ಇದೇ ಡಬಲ್ ಇಂಜಿನ್ ಸರ್ಕಾರದ ಮಹತ್ವ ಎಂದರು.

 

lokesh

Recent Posts

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

1 hour ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

2 hours ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

2 hours ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

12 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

12 hours ago