ನವದೆಹಲಿ : ಈಗಾಗಲೇ ಎಕ್ಸ್ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸದಾ ಸುಳ್ಳಿನ ಭರವಸೆ, ಭ್ರಷ್ಟಾಚಾರದ ಭರವಸೆ ನೀಡುತ್ತದೆ, ವಾರಂಟಿಯೇ ಎಕ್ಸ್ಪೈರ್ ಆಗಿರುವ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗೆ ಬೆಲೆ ಎಲ್ಲಿದೆ ಎಂದು ಹೇಳಿದ್ದಾರೆ.
ನಾವು ಮುಂದಿನ 5 ವರ್ಷಗಳು ಎಂತಹ ಕೆಲಸವನ್ನು ಮಾಡಲಿದ್ದೇವೆ ಎಂದು ಜನತೆಗೆ ತಿಳಿಸಲಿದ್ದೇವೆ, ಯಾರ ಹತ್ತಿರ ರಾಜ್ಯದ ಅಭಿವೃದ್ಧಿಯ ನೀಲಿನಕ್ಷೆ ಇದೆಯೋ ಜನರು ಅವರನ್ನೇ ಆಯ್ಕೆ ಮಾಡಬೇಕು. ಈಗಾಗಲೇ ಕರ್ನಾಟಕದ ಏರ್ಪೋರ್ಟ್, ರೈಲ್ವೆ ನಿಲ್ದಾಣ, ಮೆಟ್ರೋ ಪ್ರಶಂಸೆಗೆ ಪಾತ್ರವಾಗಿವೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕವೂ ಕೂಡ ಪ್ರಮುಖ ಪಾತ್ರವಹಿಸುತ್ತದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರ್ಕಾರ ನೇರವಾಗಿ ವಿಕಾಸದ ಕಡೆಗೆ ಹೆಜ್ಜೆ ಇಡುತ್ತದೆ, ಡಬಲ್ ಇಂಜಿನ್ ಸರ್ಕಾರವಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ, ಬಡತನ ನಿರ್ಮೂಲನೆ ತುಂಬಾ ವೇಗವಾಗಿ ಆಗುತ್ತಿದೆ. ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ ಆ ರಾಜ್ಯದಲ್ಲಿ ಕೇಂದ್ರ ಯಾವ ಯೋಜನೆಯನ್ನೂ ಸಫಲವಾಗಲು ಬಿಡುತ್ತಿಲ್ಲ, ಜನರಿಗೆ ಯೋಜನೆ ತಲುಪದೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರಾಜ್ಯ ಸರ್ಕಾರವು 4 ಸಾವಿರ ರೂ, ಕೇಂದ್ರ ಸರ್ಕಾರವು 10 ಸಾವಿರ ರೂ ನೀಡುತ್ತಿದೆ, ಜನರಿಗೆ ಒಟ್ಟು 10 ಸಾವಿರ ರೂ ತಲುಪುತ್ತಿದೆ, ಇದೇ ಡಬಲ್ ಇಂಜಿನ್ ಸರ್ಕಾರದ ಮಹತ್ವ ಎಂದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…