ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.
ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. ಯಾವ ಉದ್ದೇಶದಿಂದ ಕೊಡುತ್ತಿಲ್ಲ. ಇವರನ್ನ ಬಡವರ ವಿರೋಧಿ ಅಂತ ಕರೆಯಬೇಕಾ ಅಥಾವ ಬಡವರ ಪರ ಅಂತ ಕರೆಯಬೇಕಾ. ಜನರು ಯೋಜನೆ ಮಾಡಬೇಕು ಎಂದರು.
ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ. ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ. ತೆಲಂಗಾಣ ದವರು ಭತ್ತ ಕೊಡುತ್ತೇವೆ, ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ. ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣವನ್ನ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದರು.
ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.
ನಿನ್ನೆಯಿಂದ ಮಳೆ ಬರುತ್ತಿದೆ, ವ್ಯಾಪಕವಾಗಿ ಬರುತ್ತಿಲ್ಲ ಅಷ್ಟೇ. ಒಂದು ವೇಳೆ ಸಮಸ್ಯೆಯಾದರೆ, ಎಲ್ಲ ಸಮಸ್ಯೆಯನ್ನ ಎದುರಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿದೆ. ಮಳೆ ಬರಲಿ ಎಂದು ಪ್ರಾರ್ಥನೆ ಮಾಡ್ತಿದ್ದೇವೆ. ಬಿತ್ತನೆ ಕೆಲವಕಡೆ ಶುರುವಾಗಿದೆ ಕೆಲವುಕಡೆಯಾಗಿಲ್ಲ.ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿ ಗಳಿಗೆ ಸೂಚಿಸಿದ್ದೇನೆ. ಎರಡು ಬಾರಿ ಡಿಸಿಗಳ ಸಭೆ ನಡೆಸಿದ್ದೇನೆ. ಮಳೆ ಯಾವಾಗಲೆ ಬಂದರೂ ಬಿತ್ತನೆಗೆ ಕ್ರಮ ಕೈಗೊಂಡಿದ್ದೇವೆ. ಬಿತ್ತನೆ ಬೀಜ, ಗೊಬ್ಬರ ಸಿದ್ದವಾಗಿಟ್ಟುಕೊಳ್ಳುವಂತೆ ಕೃಷಿ ಇಲಾಖೆಗೆ ಸೂಚಿಸಿದ್ದೇನೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…