ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.
ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. ಯಾವ ಉದ್ದೇಶದಿಂದ ಕೊಡುತ್ತಿಲ್ಲ. ಇವರನ್ನ ಬಡವರ ವಿರೋಧಿ ಅಂತ ಕರೆಯಬೇಕಾ ಅಥಾವ ಬಡವರ ಪರ ಅಂತ ಕರೆಯಬೇಕಾ. ಜನರು ಯೋಜನೆ ಮಾಡಬೇಕು ಎಂದರು.
ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ. ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ. ತೆಲಂಗಾಣ ದವರು ಭತ್ತ ಕೊಡುತ್ತೇವೆ, ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ. ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣವನ್ನ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದರು.
ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.
ನಿನ್ನೆಯಿಂದ ಮಳೆ ಬರುತ್ತಿದೆ, ವ್ಯಾಪಕವಾಗಿ ಬರುತ್ತಿಲ್ಲ ಅಷ್ಟೇ. ಒಂದು ವೇಳೆ ಸಮಸ್ಯೆಯಾದರೆ, ಎಲ್ಲ ಸಮಸ್ಯೆಯನ್ನ ಎದುರಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿದೆ. ಮಳೆ ಬರಲಿ ಎಂದು ಪ್ರಾರ್ಥನೆ ಮಾಡ್ತಿದ್ದೇವೆ. ಬಿತ್ತನೆ ಕೆಲವಕಡೆ ಶುರುವಾಗಿದೆ ಕೆಲವುಕಡೆಯಾಗಿಲ್ಲ.ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿ ಗಳಿಗೆ ಸೂಚಿಸಿದ್ದೇನೆ. ಎರಡು ಬಾರಿ ಡಿಸಿಗಳ ಸಭೆ ನಡೆಸಿದ್ದೇನೆ. ಮಳೆ ಯಾವಾಗಲೆ ಬಂದರೂ ಬಿತ್ತನೆಗೆ ಕ್ರಮ ಕೈಗೊಂಡಿದ್ದೇವೆ. ಬಿತ್ತನೆ ಬೀಜ, ಗೊಬ್ಬರ ಸಿದ್ದವಾಗಿಟ್ಟುಕೊಳ್ಳುವಂತೆ ಕೃಷಿ ಇಲಾಖೆಗೆ ಸೂಚಿಸಿದ್ದೇನೆ ಎಂದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…