BREAKING NEWS

ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ: ಸಿಎಂ ಆಕ್ರೋಶ

ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ‌ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.

ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. ಯಾವ ಉದ್ದೇಶದಿಂದ ಕೊಡುತ್ತಿಲ್ಲ. ಇವರನ್ನ ಬಡವರ ವಿರೋಧಿ ಅಂತ ಕರೆಯಬೇಕಾ ಅಥಾವ ಬಡವರ ಪರ ಅಂತ ಕರೆಯಬೇಕಾ. ಜನರು ಯೋಜನೆ ಮಾಡಬೇಕು ಎಂದರು.

ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ. ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ. ತೆಲಂಗಾಣ ದವರು ಭತ್ತ ಕೊಡುತ್ತೇವೆ, ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ. ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣವನ್ನ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದರು.

ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.

ನಿನ್ನೆಯಿಂದ ಮಳೆ ಬರುತ್ತಿದೆ, ವ್ಯಾಪಕವಾಗಿ ಬರುತ್ತಿಲ್ಲ ಅಷ್ಟೇ. ಒಂದು ವೇಳೆ ಸಮಸ್ಯೆಯಾದರೆ, ಎಲ್ಲ ಸಮಸ್ಯೆಯನ್ನ ಎದುರಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿದೆ. ಮಳೆ ಬರಲಿ ಎಂದು ಪ್ರಾರ್ಥನೆ ಮಾಡ್ತಿದ್ದೇವೆ. ಬಿತ್ತನೆ ಕೆಲವಕಡೆ ಶುರುವಾಗಿದೆ ಕೆಲವುಕಡೆಯಾಗಿಲ್ಲ.ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ‌. ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿ ಗಳಿಗೆ ಸೂಚಿಸಿದ್ದೇನೆ. ಎರಡು ಬಾರಿ ಡಿಸಿಗಳ ಸಭೆ ನಡೆಸಿದ್ದೇನೆ. ಮಳೆ ಯಾವಾಗಲೆ ಬಂದರೂ ಬಿತ್ತನೆಗೆ ಕ್ರಮ ಕೈಗೊಂಡಿದ್ದೇವೆ. ಬಿತ್ತನೆ ಬೀಜ, ಗೊಬ್ಬರ ಸಿದ್ದವಾಗಿಟ್ಟುಕೊಳ್ಳುವಂತೆ ಕೃಷಿ ಇಲಾಖೆಗೆ ಸೂಚಿಸಿದ್ದೇನೆ ಎಂದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago