ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.
ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. ಯಾವ ಉದ್ದೇಶದಿಂದ ಕೊಡುತ್ತಿಲ್ಲ. ಇವರನ್ನ ಬಡವರ ವಿರೋಧಿ ಅಂತ ಕರೆಯಬೇಕಾ ಅಥಾವ ಬಡವರ ಪರ ಅಂತ ಕರೆಯಬೇಕಾ. ಜನರು ಯೋಜನೆ ಮಾಡಬೇಕು ಎಂದರು.
ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ. ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ. ತೆಲಂಗಾಣ ದವರು ಭತ್ತ ಕೊಡುತ್ತೇವೆ, ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ. ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣವನ್ನ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದರು.
ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.
ನಿನ್ನೆಯಿಂದ ಮಳೆ ಬರುತ್ತಿದೆ, ವ್ಯಾಪಕವಾಗಿ ಬರುತ್ತಿಲ್ಲ ಅಷ್ಟೇ. ಒಂದು ವೇಳೆ ಸಮಸ್ಯೆಯಾದರೆ, ಎಲ್ಲ ಸಮಸ್ಯೆಯನ್ನ ಎದುರಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿದೆ. ಮಳೆ ಬರಲಿ ಎಂದು ಪ್ರಾರ್ಥನೆ ಮಾಡ್ತಿದ್ದೇವೆ. ಬಿತ್ತನೆ ಕೆಲವಕಡೆ ಶುರುವಾಗಿದೆ ಕೆಲವುಕಡೆಯಾಗಿಲ್ಲ.ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿ ಗಳಿಗೆ ಸೂಚಿಸಿದ್ದೇನೆ. ಎರಡು ಬಾರಿ ಡಿಸಿಗಳ ಸಭೆ ನಡೆಸಿದ್ದೇನೆ. ಮಳೆ ಯಾವಾಗಲೆ ಬಂದರೂ ಬಿತ್ತನೆಗೆ ಕ್ರಮ ಕೈಗೊಂಡಿದ್ದೇವೆ. ಬಿತ್ತನೆ ಬೀಜ, ಗೊಬ್ಬರ ಸಿದ್ದವಾಗಿಟ್ಟುಕೊಳ್ಳುವಂತೆ ಕೃಷಿ ಇಲಾಖೆಗೆ ಸೂಚಿಸಿದ್ದೇನೆ ಎಂದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…