ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದಾರೆ. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತೆ : ಇನ್ನು ಪೆನ್ ಡ್ರೈವ್ ವಿಚಾರವಾಗಿ ಟ್ವೀಟ್ ಮಾಡಿರುವ ಎಚ್ಡಿಕೆ , ಪೆನ್ ಡ್ರೈವ್ ಕಳೆದಿಲ್ಲ ಅದನ್ನು ತೋರಿಸಿದೊಡನೆ ನನ್ನ ಬಳಿಗೆ ಓಡಿ ಬಂದವರ ಪಟ್ಟಿ ಕೊಡಲೇ ಸಿಎಂ ಸಾಹೇಬರೇ, ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತದೆ. ___ ಗುಂಪಾಗಿ ಬರುತ್ತವೆ. ಬಿಟ್ಟ ಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ. ಎಂದು ನಂಬಿದ್ದೇನೆ ಎಂದು ಕೌಂಟರ್ ಕೊಟ್ಟಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್ ವಿಡಿಯೋ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, ಸನ್ಮಾನ್ಯ ಮುಖ್ಯಮಂತ್ರಿಗಳೇ, ವೀಡಿಯೊ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ ನೀವು ಆರುವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ಸಿಎಂ ಕಚೇರಿಯಲ್ಲಿ ಯಾವ ಅಧಿಕಾರಿಗೆ ಯಾವ ಜವಾಬ್ದಾರಿ ಇದೆ ಎನ್ನುವುದರ ಪಟ್ಟಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…