ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದಾರೆ. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತೆ : ಇನ್ನು ಪೆನ್ ಡ್ರೈವ್ ವಿಚಾರವಾಗಿ ಟ್ವೀಟ್ ಮಾಡಿರುವ ಎಚ್ಡಿಕೆ , ಪೆನ್ ಡ್ರೈವ್ ಕಳೆದಿಲ್ಲ ಅದನ್ನು ತೋರಿಸಿದೊಡನೆ ನನ್ನ ಬಳಿಗೆ ಓಡಿ ಬಂದವರ ಪಟ್ಟಿ ಕೊಡಲೇ ಸಿಎಂ ಸಾಹೇಬರೇ, ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತದೆ. ___ ಗುಂಪಾಗಿ ಬರುತ್ತವೆ. ಬಿಟ್ಟ ಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ. ಎಂದು ನಂಬಿದ್ದೇನೆ ಎಂದು ಕೌಂಟರ್ ಕೊಟ್ಟಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್ ವಿಡಿಯೋ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, ಸನ್ಮಾನ್ಯ ಮುಖ್ಯಮಂತ್ರಿಗಳೇ, ವೀಡಿಯೊ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ ನೀವು ಆರುವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ಸಿಎಂ ಕಚೇರಿಯಲ್ಲಿ ಯಾವ ಅಧಿಕಾರಿಗೆ ಯಾವ ಜವಾಬ್ದಾರಿ ಇದೆ ಎನ್ನುವುದರ ಪಟ್ಟಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…