ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ಎಂದು ಪ್ರಶ್ನಿಸಿದ್ದಾರೆ. ನಿಮಗಾಗಿರುವ ಧನದಾಹದ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೆ ? ಮಾನಸಿಕ ಸ್ವಾಸ್ತ್ಯಕಿಂತ ಇದು ಮಾರಕ ಮನೋರೋಗವಲ್ಲವೇ ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಖಾಯಿಲೆಗೆ ತುತ್ತಾದರೆ ನಾಡಿನ ಪಾಡೇನು ? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತೆ : ಇನ್ನು ಪೆನ್ ಡ್ರೈವ್ ವಿಚಾರವಾಗಿ ಟ್ವೀಟ್ ಮಾಡಿರುವ ಎಚ್ಡಿಕೆ , ಪೆನ್ ಡ್ರೈವ್ ಕಳೆದಿಲ್ಲ ಅದನ್ನು ತೋರಿಸಿದೊಡನೆ ನನ್ನ ಬಳಿಗೆ ಓಡಿ ಬಂದವರ ಪಟ್ಟಿ ಕೊಡಲೇ ಸಿಎಂ ಸಾಹೇಬರೇ, ಸಿಂಹ ಸಿಂಗಲ್ ಆಗಿ ಬೇಟೆ ಆಡುತ್ತದೆ. ___ ಗುಂಪಾಗಿ ಬರುತ್ತವೆ. ಬಿಟ್ಟ ಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ. ಎಂದು ನಂಬಿದ್ದೇನೆ ಎಂದು ಕೌಂಟರ್ ಕೊಟ್ಟಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್ ವಿಡಿಯೋ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, ಸನ್ಮಾನ್ಯ ಮುಖ್ಯಮಂತ್ರಿಗಳೇ, ವೀಡಿಯೊ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ ನೀವು ಆರುವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ಸಿಎಂ ಕಚೇರಿಯಲ್ಲಿ ಯಾವ ಅಧಿಕಾರಿಗೆ ಯಾವ ಜವಾಬ್ದಾರಿ ಇದೆ ಎನ್ನುವುದರ ಪಟ್ಟಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…