BREAKING NEWS

ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಯವರು ಶೇ.40ರಷ್ಟು ಕಮಿಷನ್ ಪಡೆದು ದುರಾಡಳಿತ ನೀಡಿದ್ದರು. ಈಗ ಸೋಲಿನ ಹತಾಶೆಯಿಂದ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯವರಿಗೆ ರಾಜಕಾರಣದಲ್ಲಿ ಚಾಲ್ತಿಯಲ್ಲಿರಬೇಕಿದೆ. ಅದಕ್ಕಾಗಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿ ಪಂಚಖಾತ್ರಿ ಯೋಜನೆಗಳ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಮೇ 10 ರಂದು ವಿಧಾನಸಭೆ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡ ಬಳಿಕ 15 ದಿನದಲ್ಲೇ ಕಾಂಗ್ರೆಸ್ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚಿಸಿದ್ದು ಎಲ್ಲಾ ಸಚಿವರೂ ಈಗಾಗಲೇ ಇಲಾಖೆಗಳ ಪರಿಚಯ ಸಭೆಗಳನ್ನು ನಡೆಸಿ ಕಾರ್ಯಾರಂಭ ಮಾಡಿದ್ದಾರೆ. ಬಿಜೆಪಿಯವರಿಗೆ ಇದುವರೆಗೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಳ್ಳಲಾಗಿಲ್ಲ. ಸೋಲಿನ ಕಾರಣಗಳ ಆತ್ಮಾವಲೋಕನ ಆಗಿಲ್ಲ. ಮೊದಲು ಅವರು ಆ ಬಗ್ಗೆ ಗಮನ ಹರಿಸಲಿ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್‍ಗೆ ಜನ ಅಧಿಕಾರ ನೀಡಿದ್ದಾರೆ. ನಾವು ಚುನಾವಣೆಯಲ್ಲಿ ಭರವಸೆ ನೀಡಿದಂತೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಜನರ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಬಗ್ಗೆ ಬಿಜೆಪಿಯವರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಈ ಮೊದಲು ಲೋಕಸಭೆ ಚುನಾವಣೆ ವೇಳೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಭರವಸೆ ನೀಡಲಾಗಿತ್ತು. ಅಚ್ಚೆದಾನ್ ಬರಲಿದೆ. ಕೃಷಿಕರ ಆದಾಯ ದುಪ್ಪಟ್ಟಾಗಲಿದೆ. ಡಾಲರ್ ಮೌಲ್ಯ ಕಡಿಮೆಯಾಗಲಿದೆ. ಪೆಟ್ರೋಲ್, ಡೀಸಲ್ ಬೆಲೆ ಇಳಿಸುತ್ತೇವೆ ಎಂದೆಲ್ಲಾ ಭರವಸೆ ನೀಡಿದ್ದರು. ಸ್ಮಾರ್ಟ್ ಸಿಟಿಗಳ ಬಗ್ಗೆಯೂ ಭರವಸೆ ನೀಡಲಾಗಿತ್ತು. ಇದರಲ್ಲಿ ಯಾವುದಾದರೂ ಒಂದು ಈಡೇರಿದೆಯೇ ಎಂಬುದನ್ನು ಬಿಜೆಪಿಯವರು ಸ್ಪಷ್ಟಪಡಿಸಲಿ. ಬಳಿಕ ಕಾಂಗ್ರೆಸ್ ಬಗ್ಗೆ ಮಾತನಾಡಲಿ. ನಾವು ಅದರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂಬ ವಾಗ್ದಾಳಿ ನಡೆಸಿದ್ದಾರೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

6 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

11 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

11 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

11 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

11 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

12 hours ago