ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಯವರು ಶೇ.40ರಷ್ಟು ಕಮಿಷನ್ ಪಡೆದು ದುರಾಡಳಿತ ನೀಡಿದ್ದರು. ಈಗ ಸೋಲಿನ ಹತಾಶೆಯಿಂದ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯವರಿಗೆ ರಾಜಕಾರಣದಲ್ಲಿ ಚಾಲ್ತಿಯಲ್ಲಿರಬೇಕಿದೆ. ಅದಕ್ಕಾಗಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿ ಪಂಚಖಾತ್ರಿ ಯೋಜನೆಗಳ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಮೇ 10 ರಂದು ವಿಧಾನಸಭೆ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡ ಬಳಿಕ 15 ದಿನದಲ್ಲೇ ಕಾಂಗ್ರೆಸ್ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚಿಸಿದ್ದು ಎಲ್ಲಾ ಸಚಿವರೂ ಈಗಾಗಲೇ ಇಲಾಖೆಗಳ ಪರಿಚಯ ಸಭೆಗಳನ್ನು ನಡೆಸಿ ಕಾರ್ಯಾರಂಭ ಮಾಡಿದ್ದಾರೆ. ಬಿಜೆಪಿಯವರಿಗೆ ಇದುವರೆಗೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಳ್ಳಲಾಗಿಲ್ಲ. ಸೋಲಿನ ಕಾರಣಗಳ ಆತ್ಮಾವಲೋಕನ ಆಗಿಲ್ಲ. ಮೊದಲು ಅವರು ಆ ಬಗ್ಗೆ ಗಮನ ಹರಿಸಲಿ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ಗೆ ಜನ ಅಧಿಕಾರ ನೀಡಿದ್ದಾರೆ. ನಾವು ಚುನಾವಣೆಯಲ್ಲಿ ಭರವಸೆ ನೀಡಿದಂತೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಜನರ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಬಗ್ಗೆ ಬಿಜೆಪಿಯವರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.
ಈ ಮೊದಲು ಲೋಕಸಭೆ ಚುನಾವಣೆ ವೇಳೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಭರವಸೆ ನೀಡಲಾಗಿತ್ತು. ಅಚ್ಚೆದಾನ್ ಬರಲಿದೆ. ಕೃಷಿಕರ ಆದಾಯ ದುಪ್ಪಟ್ಟಾಗಲಿದೆ. ಡಾಲರ್ ಮೌಲ್ಯ ಕಡಿಮೆಯಾಗಲಿದೆ. ಪೆಟ್ರೋಲ್, ಡೀಸಲ್ ಬೆಲೆ ಇಳಿಸುತ್ತೇವೆ ಎಂದೆಲ್ಲಾ ಭರವಸೆ ನೀಡಿದ್ದರು. ಸ್ಮಾರ್ಟ್ ಸಿಟಿಗಳ ಬಗ್ಗೆಯೂ ಭರವಸೆ ನೀಡಲಾಗಿತ್ತು. ಇದರಲ್ಲಿ ಯಾವುದಾದರೂ ಒಂದು ಈಡೇರಿದೆಯೇ ಎಂಬುದನ್ನು ಬಿಜೆಪಿಯವರು ಸ್ಪಷ್ಟಪಡಿಸಲಿ. ಬಳಿಕ ಕಾಂಗ್ರೆಸ್ ಬಗ್ಗೆ ಮಾತನಾಡಲಿ. ನಾವು ಅದರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂಬ ವಾಗ್ದಾಳಿ ನಡೆಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…