BREAKING NEWS

ಕಾಂಗ್ರೆಸ್‌ ಪಾಲಿಗೆ ಚಾಣಕ್ಯ ಯಾರು ಈ ಸುನೀಲ್ ಕಾನುಗೋಲು..?

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ – ಹೊಸ ಕಾರ್ಯತಂತ್ರಗಳು ಮತ್ತು ನಿರೂಪಣೆಗಳು ಸಹ ಪ್ರಮುಖ ಕಾರಣವಾಗಿವೆ.

ಆಡಳಿತಾರೂಢ ಬಿಜೆಪಿ ವಿರುದ್ಧದ ಭ್ರಷ್ಟಾಚಾರ ಆರೋಪವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ ಸಮರ್ಥವಾಗಿ ಜನರ ಮುಂದೆ ಬಿಂಬಿಸುವಲ್ಲಿಯೂ ಯಶ ಕಂಡಿದೆ. ಇದರಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಚುನಾವಣಾ ತಂತ್ರಗಾರ ಸುನಿಲ್ ಕಾನುಗೋಲು ಪಾತ್ರವೂ ಬಹುಮುಖ್ಯವಾಗಿದೆ.

ಸುನಿಲ್ ಕಾನುಗೋಲು ಕರ್ನಾಟಕದವರೇ ಆಗಿದ್ದರೂ ಬೆಳೆದಿದ್ದು ನೆರೆಯ ತಮಿಳುನಾಡಿನ ಚೆನ್ನೈನಲ್ಲಿ. ಈ ಹಿಂದೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರೊಂದಿಗೆ ಕೆಲಸ ಮಾಡಿದ್ದರು. 2014ರಲ್ಲಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಿಜೆಪಿಯ ಬಿಲಿಯನ್ ಮೈಂಡ್ಸ್ ಅಸೋಶಿಯೇಷನ್ (Association of Billion Minds – ABM) ಮುಖ್ಯಸ್ಥರಾಗಿಯೂ ಇವರು ಸೇವೆ ಸಲ್ಲಿಸಿದರು.

ಬಿಜೆಪಿಯ ಪರವಾಗಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆಯಲ್ಲೂ ಚುನಾವಣಾ ಪ್ರಚಾರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ವಿಜಯಶಾಲಿಯಾಗಿತ್ತು. 2018ರಲ್ಲಿ ಕರ್ನಾಟಕದಲ್ಲೂ ಬಿಜೆಪಿ ಪರ ಇದೇ ಸುನಿಲ್ ಕಾನುಗೋಲು ಕೆಲಸವನ್ನೂ ಮಾಡಿದ್ದರು. ಆಗ ಅತಿದೊಡ್ಡ ಪಕ್ಷವಾಗಿ ಕಮಲ ಪಕ್ಷ ಹೊರಹೊಮ್ಮಿತ್ತು.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾಗಿ ಚುನಾವಣಾ ತಂತ್ರಗಳನ್ನು ಸುನಿಲ್ ಕಾನುಗೋಲು ರೂಪಿಸಿದ್ದರು. ಕಳೆದ ವರ್ಷದ ಮಾರ್ಚ್ನಲ್ಲಿ ಅವರನ್ನು ಕಾಂಗ್ರೆಸ್ ನೇಮಿಸಿಕೊಂಡಿತ್ತು. ಇದಾದ ಎರಡು ತಿಂಗಳ ನಂತರ ಸೋನಿಯಾ ಗಾಂಧಿಯವರು ಕಾನುಗೋಲು ಅವರನ್ನು ಪಕ್ಷದ 2024ರ ಲೋಕಸಭಾ ಚುನಾವಣಾ ಕಾರ್ಯಪಡೆಯ ಸದಸ್ಯರನ್ನಾಗಿ ನೇಮಿಸಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಡೆದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಮುಖ ಪಾತ್ರವನ್ನು ಸುನಿಲ್ ಕಾನುಗೋಲು ವಹಿಸಿದ್ದರು. ಕರ್ನಾಟಕ ಮೂಲಕ ಸಾಗಿದ್ದ ಈ ಯಾತ್ರೆಯು ರಾಜ್ಯ ಚುನಾವಣೆಗೆ ಮುನ್ನ ಕಾಂಗ್ರೆಸ್ ಜನರೊಂದಿಗೆ ಸಂಪರ್ಕ ಸಾಧಿಸಲು ನೆರವಾಗಿತ್ತು. ಬಹುಮುಖ್ಯವಾಗಿ ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದರು.

ತಮ್ಮದೇ ಆದ ಸಮೀಕ್ಷೆ ಮೂಲಕ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದ್ದರು. ಕೆಲವರನ್ನು ಹೊರತುಪಡಿಸಿ ಕಾನುಗೋಲು ತಂಡ ನಡೆಸಿದ ಸಮೀಕ್ಷೆಗಳ ಆಧಾರದ ಮೇಲೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು.

ಮೋದಿ ವಿರುದ್ಧ ವೈಯಕ್ತಿಕ ಟೀಕೆ ಮಾಡದಂತೆ, ಹಿಂದು-ಮುಸ್ಲಿಂ ಕುರಿತಾದ ವಿಚಾರ ಮುನ್ನಲೆಗೆ ತರದಂತೆ ಈ ಟೀಮ್ ಸಲಹೆಯನ್ನೂ ನೀಡಿತ್ತು. ಅದರೊಂದಿಗೆ ಕೆಲವೊಂದು 70 ಸೀಟ್ಗಳಲ್ಲಿ ಕಾಂಗ್ರೆಸ್ನ ಸ್ಪರ್ಧೆ ನೆಪಮಾತ್ರ ಎನ್ನುವುದನ್ನೂ ಈ ಟೀಮ್ ತಿಳಿಸಿಬಿಟ್ಟಿತ್ತು. ಈ ಎಲ್ಲದರ ಯಶಸ್ಸು ಈಗ ಸಿಕ್ಕಿದೆ.

ಕಾಂಗ್ರೆಸ್ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳನ್ನು ನಡೆಸುವಲ್ಲಿ ಸುನಿಲ್ ಪ್ರಬಲ ತಂತ್ರಗಾರಿಕೆ ರೂಪಿಸಿದ್ದರು. ಈ ಹಿಂದೆ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪರವಾಗಿ ಕೆಲಸ ಮಾಡಿದ್ದರು.

ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ಗೆ ತನ್ನ ರಾಜಕೀಯ ನೆಲೆಯನ್ನು ಗಟ್ಟಿಗೊಳಿಸುವ ಅನಿರ್ವಾಯತೆ ಇದೆ. ಜೊತೆಗೆ ರಾಜಸ್ಥಾನ ಮತ್ತು ಛತ್ತೀಸ್ಗಢ ಚುನಾವಣೆಗಳಲ್ಲಿ ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳುವುದು ಹಾಗೂ ಮಧ್ಯಪ್ರದೇಶದಲ್ಲಿ ಅಧಿಕಾರ ಬರುವ ಮುಖ್ಯವಾದ ಸವಾಲು ಕೈ ಪಾಳಯದ ಮುಂದಿದೆ.

ಇಷ್ಟೇ ಅಲ್ಲ, ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸುವ ದೊಡ್ಡ ಸವಾಲು ಕಾಂಗ್ರೆಸ್ಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಪಕ್ಷಕ್ಕೆ ಸಿಕ್ಕಿರುವ ಸರಳ ಬಹುಮತದ ಗೆಲುವು ಮತ್ತು ಚುನಾವಣಾ ತಂತ್ರಗಾರಿಕೆಗಳು ಹೇಗೆ ಕೆಲಸ ಮಾಡುತ್ತವೆ ಎಂಬುವುದನ್ನು ಕಾದುನೋಡಬೇಕಿದೆ.

andolanait

Recent Posts

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

9 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

27 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

42 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

1 hour ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago