BREAKING NEWS

ಛತ್ತೀಸ್‌ಗಢದಲ್ಲಿ ಬಿಜೆಪಿ ಮುಖ್ಯಮಂತ್ರಿ ಯಾರು?

ನವದೆಹಲಿ : ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (ಭಾರತೀಯ ಜನತಾ ಪಕ್ಷ) ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, 90 ರಲ್ಲಿ 53 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್‌ ಆಡಳಿತವನ್ನು ಕೊನೆಗಾಣಿಸಲಿದೆ ಎಂಬುದು ಬಹುತೇಕ ಖಚಿತವಾಗಿದೆ.

ಆದರೆ, ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಪ್ರಕಟವಾಗದ ಕಾರಣ ಪಕ್ಷವು ತನ್ನ ನಾಯಕನನ್ನು ಆಯ್ಕೆ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳ ಜೊತೆಗೆ ಹಳೆಯ ಮತ್ತು ಹೊಸ ಮುಖಗಳ ಆಕಾಂಕ್ಷೆಗಳನ್ನು ಸಮತೋಲನಗೊಳಿಸಬೇಕಾಗುತ್ತದೆ. ಈ ಮೂಲಕ ಯಾರಿಗೆ ಛತ್ತೀಸ್‌ಗಢದ ಗದ್ದುಗೆ ದೊರೆಲಿದೆ ಎಂಬುದನ್ನು ಕಾದುನೊಡಬೇಕಿದೆ.

ಅಧಿಕಾರ ಹಿಡಿಯುವ ಬಿಜೆಪಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 24 ಗಂಟೆ ವಿದ್ಯುತ್, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಎಲ್ಲರಿಗೂ ಉಚಿತ ಆರೋಗ್ಯ ವಿಮೆ, ರೈತರ ಆದಾಯ ದ್ವಿಗುಣಗೊಳಿಸುವಂತಹ ಭರವಸೆಗಳನ್ನು ನೀಡಿದ್ದು, ಇದನ್ನು ಈಡೇರಿಸುವ ಜವಾಬ್ದಾರಿ ನೂತನ ಮುಖ್ಯಮಂತ್ರಿಯದ್ದಾಗಿದೆ.

ಛತ್ತೀಸ್‌ಗಢ ಸಿಎಂ ಹುದ್ದೆಗೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ ನೋಡಿ.!

ಮಹಿಳಾ ಕ್ರಿಕೆಟಿಗ-ರಾಜಕಾರಣಿಯಾಗಿರುವ ರೇಣುಕಾ ಸಿಂಗ್, ಬಿಜೆಪಿಯ ಛತ್ತೀಸ್‌ಗಢ ಘಟಕದ ಪ್ರಸ್ತುತ ಅಧ್ಯಕ್ಷ ಮತ್ತು ಬಿಲಾಸ್‌ಪುರ ಸಂಸದರಾಗಿರುವ ಅರುಣ್ ಸಾವೊ, ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌, ಮಾಜಿ ಐಎಎಸ್ ಅಧಿಕಾರಿ ಮತ್ತು ಮೊದಲ ಬಾರಿಗೆ ಶಾಸಕರಾಗಿರುವ ಓಪಿ ಚೌಧರಿ, ಹಿರಿಯ ನಾಯಕ ಭಗವಾನ್ ವಿಷ್ಣು, ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಸೋದರಳಿಯ ವಿಜಯ್ ಬಾಘೆಲ್ ಸೇರಿದಂತೆ ಹಲವು ಘಟಾನುಘಟಿ ನಾಯಕರ ಹೆಸರುಗಳು ಕೇಳಿಬುರತ್ತಿವೆ.

ಬಿಜೆಪಿ ಹೈ ಕಮಾಂಡ್‌ ಯಾರಿಗೆ ಒಲವು ತೋರಿಸಲಿದೆ. ಮತ್ತು ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

2018ರ ಚುನಾವಣೆ ನೋಟ : 90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಕಾಂಗ್ರೆಸ್ 71 ಸ್ಥಾನಗಳನ್ನು ಗೆದ್ದುಕೊಂಡು ಏಕೈಕ ಪಕ್ಷವಾಗಿ ಅಧಿಕಾರ ಹಿಡಿದಿತ್ತು. 2003ರಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿಗೆ 2018ರ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತ್ತು. ಇದೀಗ ಮತ್ತೆ ಬಿಜೆಪಿ ತನ್ನ ಕಮಾಲ್‌ ಮುಂದುವರೆಸಿದ್ದು, ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಹೇಳಲಾಗುತ್ತಿದೆ.

andolanait

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

28 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

49 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

2 hours ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

3 hours ago